ವಿಧಾನ ಪರಿಷತ್ ಕಲಾಪ 
ರಾಜ್ಯ

ಛತ್ತೀಸ್ ಗಢದಲ್ಲಿ ವಿದ್ಯುತ್ ಘಟಕ ಸ್ಥಾಪನೆ ಯೋಜನೆ ರದ್ದಾಗಿಲ್ಲ: ಡಿಕೆ ಶಿವಕುಮಾರ್

ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ, ವಿದ್ಯುತ್‌ ಘಟಕ ಸ್ಥಾಪನೆ ಸಂಬಂಧ ನಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿತ್ತು....

ಬೆಳಗಾವಿ: ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ, ವಿದ್ಯುತ್‌ ಘಟಕ ಸ್ಥಾಪನೆ ಸಂಬಂಧ ನಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ತಕ್ಷಣ ಆ ಒಪ್ಪಂದ ರದ್ದುಪಡಿಸಿದರು ಎಂಬ  ಛತ್ತೀಸಗಡ ಮುಖ್ಯಮಂತ್ರಿ ರಮಣ್‌ ಸಿಂಗ್‌ ಅವರ ಆರೋಪವನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು, ಛತ್ತೀಸ್ ಗಢ ವಿದ್ಯುತ್ ಯೋಜನೆ ರದ್ದಾಗಿಲ್ಲ ಎಂದು ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.
ಇಂದು ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು, ಛತ್ತೀಸ್ ಗಢದಲ್ಲಿ ವಿದ್ಯುತ್‌ ಘಟಕ ಸ್ಥಾಪನೆ ಯೋಜನೆಯನ್ನು ಸರ್ಕಾರ ಕೈಬಿಟ್ಟಿಲ್ಲ. ಈ ಯೋಜನೆ ಬಗ್ಗೆ ರಮಣ್ ಸಿಂಗ್ ಅವರಿಗೆ ತಪ್ಪು ಮಾಹಿತಿ ನೀಡಿದಂತೆ ಕಾಣುತ್ತಿದೆ ಎಂದಿದ್ದಾರೆ.
ಕಲ್ಲಿದ್ದಲು ಕೊರೆತೆಯಿಂದಾಗಿ ಛತ್ತೀಸ್ ಗಢದಲ್ಲಿ ವಿದ್ಯುತ್‌ ಘಟಕ ಸ್ಥಾಪನೆ ವಿಳಂಬವಾಗುತ್ತಿದೆ. ಯೋಜನೆಗಾಗಿ ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಯನ್ನು ಹಂಚಿಕೆ ಮಾಡಿದರೆ ರಾಜ್ಯ ಸರ್ಕಾರ ಈ ಕೂಡಲೇ ವಿದ್ಯುತ್ ಘಟಕ ಸ್ಥಾಪನೆ ಯೋಜನೆಗೆ ಚಾಲನೆ ನೀಡಲಿದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು, ಕಲ್ಲಿದ್ದಲು ಗಣಿ ಹಂಚಿಕೆ ವಿಳಂಬವಾಗುತ್ತಿದ್ದರೆ ರಾಜ್ಯ ಸರ್ಕಾರ ಈ ಕೂಡಲೇ ಸರ್ವಪಕ್ಷ ನಿಯೋಗದೊಂದಿಗೆ ಸಂಬಂಧಿಸಿದ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಬೇಕು ಎಂದರು.
ನಿನ್ನೆ ಬಿಜೆಪಿ ಪರಿವರ್ತನಾ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ರಮಣ್ ಸಿಂಗ್ ಅವರು, ವಿದ್ಯುತ್‌ ಘಟಕ ಸ್ಥಾಪನೆ ಸಂಬಂಧ ಕರ್ನಾಟಕ ನಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ತಕ್ಷಣ ಆ ಒಪ್ಪಂದ ರದ್ದುಪಡಿಸಿದರು ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT