ಅನಿಲ್ ರಾಜ್, ರವಿ ಬೆಳಗೆರೆ 
ರಾಜ್ಯ

ಪತ್ರಕರ್ತ ರವಿ ಬೆಳಗೆರೆ, ಅನಿಲ್‌ ರಾಜ್‌ ಬಂಧನಕ್ಕೆ ಕ್ರಮ ಕೈಗೊಳ್ಳಿ: ಪೊಲೀಸರಿಗೆ ವಿಧಾನಸಭೆ ಸೂಚನೆ

ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಯಿಂದ ಒಂದು ವರ್ಷ ಜೈಲು ಶಿಕ್ಷೆಗೆ....

ಬೆಳಗಾವಿ: ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಯಿಂದ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ 'ಹಾಯ್‌ ಬೆಂಗಳೂರು' ಪತ್ರಿಕೆ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ರವಿ ಬೆಳಗೆರೆ ಹಾಗೂ ಮತ್ತೊಬ್ಬ ಪತ್ರಕರ್ತ ಹಾಗೂ ಅನಿಲ್ ರಾಜ್ ಅವರನ್ನು ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾ ಸಚಿವಾಲಯ ಗೃಹ ಇಲಾಖೆಗೆ ಪತ್ರ ಬರೆದಿದೆ.
ರವಿ ಬೆಳಗೆರೆ ಮತ್ತು ಅನಿಲ್‌ ರಾಜ್‌ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗಳನ್ನು ಮಂಗಳವಾರ ವಿಧಾನಸಭೆ ತಿರಸ್ಕರಿಸಿದ್ದು, ಅವರಿಗೆ ಜೈಲು ಶಿಕ್ಷೆ ವಿಧಿಸಬೇಕು ಎಂಬ ಹಿಂದಿನ ನಿರ್ಣಯವನ್ನು ಎತ್ತಿ ಹಿಡಿದಿದೆ. ಸದನದ ನಿರ್ಣಯವನ್ನು ತಕ್ಷಣವೇ ಅನುಷ್ಠಾನ ಮಾಡುವಂತೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ ಹಾಗೂ ಬೆಂಗಳೂರು ನಗರ ‍ಪೊಲೀಸ್ ಕಮಿಷನರ್‌ಗೆ ಪತ್ರ ಬರೆಯಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ತಿಳಿಸಿದ್ದಾರೆ.
ರವಿ ಬೆಳಗರೆ ಮತ್ತು ಯಲಹಂಕ ವಾಯ್ಸ್‌ ಪತ್ರಿಕೆಯ ಸಂಪಾದಕ ಅನಿಲ್‌ ರಾಜ್‌ ಅವರಿಗೆ ಹಕ್ಕು ಬಾಧ್ಯತಾ ಸಮಿತಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10,000 ರುಪಾಯಿ ದಂಡ ವಿಧಿಸಿತ್ತು. ಇದನ್ನು ಮರು ಪರಿಶೀಲಿಸುವಂತೆ ಪತ್ರಕರ್ತರಿಬ್ಬರೂ ವಿಧಾನಸಭೆ ಅಧ್ಯಕ್ಷ ಕೆ.ಬಿ. ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT