ವಜುಭಾಯಿ ವಾಲಾ 
ರಾಜ್ಯ

ಕುಲಪತಿಗಳ ನೇಮಕ ವಿಳಂಬಕ್ಕೆ ಸರ್ಕಾರವನ್ನು ದೂರಿದ ರಾಜ್ಯಪಾಲ ವಜುಭಾಯಿ ವಾಲಾ

ಬೆಂಗಳೂರು ಹಾಗೂ ಮೈಸೂರು ವಿಶ್ವವಿದ್ಯಾಲಯ ಸೇರಿದಂತೆ ಆರು ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿಚಾರದಲ್ಲಿ ರಾಜ್ಯಪಾಲರು....

ಮೈಸೂರು: ಬೆಂಗಳೂರು ಹಾಗೂ ಮೈಸೂರು ವಿಶ್ವವಿದ್ಯಾಲಯ ಸೇರಿದಂತೆ ಆರು ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿಚಾರದಲ್ಲಿ ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಹಗ್ಗ-ಜಗ್ಗಾಟ ನಡೆಯುತ್ತಿದ್ದು, ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರು ಬುಧವಾರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ರಾಜ್ಯಪಾಲರು, ರಾಜ್ಯ ಸರ್ಕಾರ ಖಾಲಿ ಇರುವ ವಿವಿಗಳಿಗೆ ಕುಲಪತಿಗಳ ಹೆಸರನ್ನು ರಾಜಭವನಕ್ಕೆ ಶಿಫಾರಸು ಮಾಡಬೇಕು. ನಾನು ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳುವುದಿಲ್ಲ. ಮೂರೇ ದಿನಗಳಲ್ಲಿ ಕ್ಲಿಯರ್ ಮಾಡುವುದಾಗಿ ಹೇಳಿದ್ದಾರೆ.
ಕುಲಪತಿಗಳ ನೇಮಕ ಶಿಫಾರಸು ವಾಪಸ್ ಕಳುಹಿಸಿರುವುದಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಅವರಿಗೆ ರಾಜಭವನದ ಬಗ್ಗೆ ಅಸಮಾಧಾನವಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜ್ಯಪಾಲರು, ಕಡತಗಳು ಕ್ರಮವಾಗಿ ಇರಲಿಲ್ಲ. ಹೀಗಾಗಿ ಸರ್ಕಾರಕ್ಕೆ ವಾಪಸ್ ಕಳುಹಿಸಲಾಗಿದೆ ಎಂದಿದ್ದಾರೆ.
ಕುಲಪತಿಗಳ ನೇಮಕ ವಿಳಂಬವಾಗುವುದರಿಂದ ವಿವಿಗಳಲ್ಲಿ ಉಪನ್ಯಾಸಕರ ನೇಮಕಾತಿಯೂ ವಿಳಂಬವಾಗುತ್ತಿದ್ದು, ಇದರಿಂದ ಉಪನ್ಯಾಸಕರ ಸಂಖ್ಯೆ ಶೇ.50ಕ್ಕೆ ಇಳಿದಿದೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ವಜುಭಾಯಿ ವಾಲಾ ಅವರು, ಹಂಗಾಮಿ ಕುಲಪತಿಗಳು ಉಪನ್ಯಾಸಕರ ನೇಮಕಾತಿ ನಡೆಸಬಹುದು ಮತ್ತು ಬಡ್ತಿ ನೀಡಬಹದು. ಕುಲಪತಿಗಳ ಹುದ್ದೆ ಖಾಲಿ ಬಿಡುವುದು ಆಡಳಿತಾತ್ಮಕ ವಿಚಾರ ಎಂದು ಹೇಳಿದ್ದಾರೆ.
ಬೆಂಗಳೂರು, ಮೈಸೂರು, ತುಮಕೂರು ವಿಶ್ವವಿದ್ಯಾಲಯ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಜಾನಪದ ವಿಶ್ವವಿದ್ಯಾಲಯ ಕುಲಪತಿಗಳ ನೇಮಕ ಬಾಕಿಯಿದೆ. ಈ ಸಂಬಂಧ ಕಳೆದ 6 ತಿಂಗಳಿನಿಂದಲೂ ಪ್ರಕ್ರಿಯೆ ನಡೆಯುತ್ತಿದೆ. ಕುಲಪತಿ ಶೋಧನಾ ಸಮಿತಿ ರಚಿಸಿ ಆಯ್ಕೆಯಾದ ಹೆಸರುಗಳನ್ನು ರಾಜಭವನಕ್ಕೆ ಕಳುಹಿಸಲಾಗಿದೆ. ಆದರೆ, ಪ್ರತಿಷ್ಠಿತ ಎನಿಸಿಕೊಂಡಿರುವ ಬೆಂಗಳೂರು ಹಾಗೂ ಮೈಸೂರು ವಿವಿಗಳಿಗೆ ತಮಗೆ ಆಪ್ತರಾದವರನ್ನು ನೇಮಿಸುವಂತೆ ಸರ್ಕಾರದ ಕಡೆಯಿಂದ ರಾಜಭವನದ ಮೇಲೆ ಒತ್ತಡ ಹೇರಲಾಗುತ್ತಿದೆ. ಹಾಗಾಗಿ ರಾಜ್ಯಪಾಲರು ಅಂಗೀಕಾರ ನೀಡಿಲ್ಲ. ಬದಲಾಗಿ ಹೊಸ ಪ್ರಸ್ತಾವ ಕಳುಹಿಸಿಕೊಡುವಂತೆ ನಿರ್ದೇಶನ ನೀಡಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT