ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಅಶ್ರುವಾಯು ಶೆಲ್ ಸಿಡಿತ, ಕೆಲಹೊತ್ತು ಸಂಚಾರ ಅಸ್ತವ್ಯಸ್ತ

ನಗರದ ಸೇನಾ ಮೀಸಲು ಮೈದಾನದಲ್ಲಿ ಅವಧಿ ಮುಗಿದ ಅಶ್ರುವಾಯು ಶೆಲ್ ಗಳು ಸಿಡಿದು ....

ಬೆಂಗಳೂರು: ನಗರದ ಸೇನಾ ಮೀಸಲು ಮೈದಾನದಲ್ಲಿ ಅವಧಿ ಮುಗಿದ ಅಶ್ರುವಾಯು ಶೆಲ್ ಗಳು ಸಿಡಿದು ರಸ್ತೆಗೆ ಹರಿದು ಮೈಸೂರು ರಸ್ತೆಯಲ್ಲಿ ಪ್ರಯಾಣಿಕರು ಇಂದು ಬೆಳಗ್ಗೆ ತೊಂದರೆ ಅನುಭವಿಸುವಂತಾಯಿತು. ಇದರಿಂದ ಸೇನಾ ಮೀಸಲು ಮೈದಾನ ಮತ್ತು ಸಿರ್ಸಿ ಸರ್ಕಲ್ ಎದುರಿನ ರಸ್ತೆಯಲ್ಲಿ ಅವ್ಯವಸ್ಥೆ ಮತ್ತು ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.
ಇಂದು ಬೆಳಗ್ಗೆ ಸುಮಾರು 8.30ರ ಹೊತ್ತಿಗೆ ಅಗ್ನಿಶಾಮಕ ಮತ್ತು ಸುರಕ್ಷ ಸೇವೆ ಸಿಬ್ಬಂದಿ ಹಾಗೂ ಕೇಂದ್ರ ಸೇನಾ ಮೀಸಲು ಪಡೆಯ ಸಿಬ್ಬಂದಿ ಕೆಲವು ಅವಧಿ ಮುಗಿದ ಅಶ್ರುವಾಯು ಶೆಲ್ ಗಳನ್ನು ನಾಶಪಡಿಸುತ್ತಿದ್ದರು. ಒಂದೇ ಸಲಕ್ಕೆ 12 ಶೆಲ್ ಗಳನ್ನು ನಾಶಪಡಿಸಲಾಯಿತು. ಇದರಿಂದ ಹೊರಬರುತ್ತಿದ್ದ ಗ್ಯಾಸ್ ಮೈಸೂರು ರಸ್ತೆಯನ್ನು ಆವರಿಸಿತು. ಇದರಿಂದ ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ತೀವ್ರ ತೊಂದರೆಯುಂಟಾಯಿತು. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಎಚ್ಚರಿಸಲಾಯಿತು. ಅಲ್ಲಿಗೆ ಆಗಮಿಸಿದ ಸಿಬ್ಬಂದಿ ಹತ್ತಿರದ ಫ್ಯಾಕ್ಟರಿಯಿಂದ ಸೋರಿಕೆಯಾದ ಹೊಗೆಯಾಗಿರಬಹುದು ಎಂದು ಆರಂಭದಲ್ಲಿ ಶಂಕಿಸಿದರು.
ಈ ಘಟನೆಯಿಂದ ಇಂದು ಬೆಳಗ್ಗೆ ಮೈಸೂರು ರಸ್ತೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರ ದಟ್ಟಣೆಯುಂಟಾಯಿತು. ನಮಗೆ ಇಲ್ಲಿಯ ತರಹ ಅಶ್ರುವಾಯು ಶೆಲ್ ಗಳನ್ನು ಸಿಡಿಸಲು ಮುಕ್ತ ಪ್ರದೇಶ ಸಿಗುವುದಿಲ್ಲ. ಹಾಗಾಗಿ ಇಲ್ಲಿ ಸೇನಾ ಪಡೆಯ ಮುಖ್ಯಸ್ಥರ ಮೇಲ್ವಿಚಾರಣೆ ಯಲ್ಲಿ ಮಾಡಿದೆವು ಎನ್ನುತ್ತಾರೆ.
ಕೆಲ ಹೊತ್ತಿನ ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT