ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾದ ವಿದೇಶಿ ಕರೆನ್ಸಿ 
ರಾಜ್ಯ

32 ಲಕ್ಷ ರೂ.ವಿದೇಶಿ ಕರೆನ್ಸಿ ವಶಪಡಿಸಿಕೊಂಡ ಸುಂಕ ಅಧಿಕಾರಿಗಳು, ಓರ್ವನ ಬಂಧನ

ಕೇರಳದಿಂದ ಬಂದ ವ್ಯಕ್ತಿಯಿಂದ 32.25 ಲಕ್ಷ ರೂಪಾಯಿ ವಿದೇಶಿ ಕರೆನ್ಸಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ...

ಬೆಂಗಳೂರು: ಕೇರಳದಿಂದ ಬಂದ ವ್ಯಕ್ತಿಯಿಂದ 32.25 ಲಕ್ಷ ರೂಪಾಯಿ ವಿದೇಶಿ ಕರೆನ್ಸಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಂಕ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಿನ್ನೆ ನಡೆದಿದೆ. 
ಲ್ಯಾಪ್ ಟಾಪ್ ಬ್ಯಾಗ್ ನಲ್ಲಿ ತುಂಬಿಸಿಕೊಂಡು ಬಂದು ಹಣವನ್ನು ದುಬೈಗೆ ಕಳುಹಿಸಲು ವ್ಯಕ್ತಿ ಯೋಜನೆ ಹಾಕಿಕೊಂಡಿದ್ದ. ಕೇರಳದ ಕೋಜಿಕ್ಕೋಡಿನ ಅಬ್ದುಲ್ ರಫೀಕ್ ಎಂಬಾತನನ್ನು ದುಬೈಗೆ ಎಮಿರೇಟ್ಸ್ ವಿಮಾನ ಇಕೆ 0569ನಲ್ಲಿ ಪ್ರಯಾಣಿಸುತ್ತಿದ್ದಾಗ ವಿಮಾನ ನಿಲ್ದಾಣದ ಸುಂಕ ಅಧಿಕಾರಿಗಳು ಬಂಧಿಸಿದ್ದಾರೆ.
ಸುಂಕ ಅಧಿಕಾರಿಗಳ ಮುಂದೆ ತಪಾಸಣೆಗೆ ಮುಂದಾಗದೆ ಹೋದಾಗ ಸಂಶಯ ಬಂದು ಅಧಿಕಾರಿಗಳು ಅಬ್ದುಲ್ ರಫೀಕ್ ನನ್ನು ತಡೆದರು. ಅವನ ಬಳಿಯಿದ್ದ ಬ್ಯಾಗನ್ನು ಪಡೆದು ತಪಾಸಣೆ ನಡೆಸಿದರು. ಆಗ ಆತನ ಲ್ಯಾಪ್ ಟಾಪ್ ನಲ್ಲಿ 32.25 ಲಕ್ಷ ರೂಪಾಯಿ ವಿದೇಶಿ ನೋಟುಗಳು ಸಿಕ್ಕಿದವು. ರಫೀಕ್ ಗೆ ಅಷ್ಟೊಂದು ವಿದೇಶಿ ಹಣ ಎಲ್ಲಿಂದ ಸಿಕ್ಕಿತು ಎಂಬ ಬಗ್ಗೆ ಸುಂಕ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT