ಕೆ ಎಸ್ ಭಗವಾನ್ 
ರಾಜ್ಯ

ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನ ಗೋಷ್ಠಿಯಲ್ಲಿ ಭಗವಾನ್ ವಿರುದ್ಧ ಪ್ರತಿಭಟನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಮ ದೇವರಲ್ಲ, ರಾಮ ಆಳ್ವಿಕೆಯಲ್ಲಿ...

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಮ ದೇವರಲ್ಲ, ರಾಮ ಆಳ್ವಿಕೆಯಲ್ಲಿ ತಪ್ಪು ಮಾಡಿದ್ದಾನೆ, ಜಾತಿ ವ್ಯವಸ್ಥೆ ಮಾಡುತ್ತಿದ್ದ ಎಂದ ಸಾಹಿತಿ ಪ್ರೊ.ಕೆಎಸ್ ಭಗವಾನ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ. 
ಇಂದು ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ನಡೆಯುತ್ತಿರುವ ಎರಡನೆ ದಿನದ ಸಾಹಿತ್ಯ ಸಮ್ಮೇಳನದ ಗೋಷ್ಠಿಯಲ್ಲಿ ಭಗಾವನ್ ಅವರು ಅಲಕ್ಷಿತ ಸಮುದಾಯಗಳ ಕುರಿತು ಮಾತನಾಡುತ್ತ, ರಾಮನ ವಿರುದ್ಧ ಹೇಳಿಕೆ ನೀಡಿದಾಗ ಸಭಿಕರು ಗದ್ದಲ ಎಬ್ಬಿಸಿದರು.
ಉಡುಪಿಯಲ್ಲಿ ನಡೆದ ಧರ್ಮ ಸಂಸತ್ತಿನಲ್ಲಿ ರಾಮ ಮಂದಿರ ಕಟ್ಟುವ ಚರ್ಚೆ ನಡೆಯುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನದ ಸುದ್ದಿಗಳಿಗಿಂತ ಹೆಚ್ಚಾಗಿ ಆ ವಿಚಾರಕ್ಕೆ ಪ್ರಾಧಾನ್ಯ ನೀಡಿವೆ. ಇದು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಭಗವಾನ್ ಟೀಕಿಸಿದರು.
ತುಂಬು ಗರ್ಭಿಣಿಯನ್ನು ಕಾಡಿಗಟ್ಟಿದ ರಾಮ ದೇವರಲ್ಲ, ದೇಶದ ಇತಿಹಾಸ ಸುಳ್ಳಿನ ಕಂತೆ. ಇದನ್ನು ಪಠ್ಯದಲ್ಲಿ ಅಳವಡಿಸಲು ಸರ್ಕಾರ ತೊಡಗಿದೆ. ನೀವೆಲ್ಲ ಗುಲಾಮರು ಎಂದು ಕಿಡಿಕಾರಿದರು.  ನಂತರ ಭಗವಾನ್ ಪರ ಮತ್ತು ವಿರೋಧ ಕುರಿತು ಸಭಿಕರು ಗದ್ದಲ ಎಬ್ಬಿಸಿದರು. ಪೊಲೀಸರು ಮಧ್ಯಪ್ರವೇಶ ಮಾಡಿ ಬಿಗಿಭದ್ರತೆಯಲ್ಲಿ ಭಗವಾನ್ ಅವರನ್ನು ಕರೆದುಕೊಂಡು ಹೋದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT