ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕ ದರ್ಶನ್ ನ ಮೃತದೇಹಕ್ಕಾಗಿ ಕಾಯುತ್ತಿದ್ದ ಮನೆಯವರು 
ರಾಜ್ಯ

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ಸು ಹರಿದು 9 ವರ್ಷದ ಬಾಲಕ ಸಾವು

ಮೆಜೆಸ್ಟಿಕ್ ಬಸ್ ನಿಲ್ದಾಣದ ಹತ್ತಿರ ಬಸ್ಸಿಗೆ ಸ್ಕೂಟರ್ ಡಿಕ್ಕಿ ಹೊಡೆದು 9 ವರ್ಷದ...

ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದ ಹತ್ತಿರ ಬಸ್ಸಿಗೆ ಸ್ಕೂಟರ್ ಡಿಕ್ಕಿ ಹೊಡೆದು 9 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ನಿನ್ನೆ ನಡೆದಿದ್ದು, ಬಸ್ ಚಾಲಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ದರ್ಶನ್ ಮತ್ತು ಆತನ ತಂಗಿ 4 ವರ್ಷದ ನಿಹಾರಿಕಾ ತಮ್ಮ ತಾತ ಟಿ.ಬಿ.ರಾಜಣ್ಣ ಜೊತೆ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದರು. ರಾಜಣ್ಣ ಅವರು ಮೊಮ್ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ತಮ್ಮ ಮನೆ ಕಾಟನ್ ಪೇಟೆ ಕಡೆಗೆ ಬರುತ್ತಿದ್ದರು. ಈ ಘಟನೆ ನಿನ್ನೆ ಮಧ್ಯಾಹ್ನ 12.15ರ ಸುಮಾರಿಗೆ ನಡೆದಿದ್ದು ತಾತ ಹೆಲ್ಮೆಟ್ ಧರಿಸಿದ್ದರೆ ಮೊಮ್ಮಕ್ಕಳು ಧರಿಸಿರಲಿಲ್ಲ. ಸ್ಕೂಟರ್ ನಲ್ಲಿ ಸಂಗೊಳ್ಳಿ ರಾಯಣ್ಣ ಸರ್ಕಲ್ ಹತ್ತಿರ ಹೋಗುವಾಗ ಅವರ ಎದುರಿಗೆ ಕೆಎಸ್ ಆರ್ ಟಿಸಿ ಬಸ್ಸೊಂದು ಯು ಟರ್ನ್ ತೆಗೆದುಕೊಳ್ಳುತ್ತಿತ್ತು.
ಸ್ಕೂಟರ್ ಬಸ್ಸಿಗೆ ಡಿಕ್ಕಿ ಹೊಡೆಯಿತು. ಆಗ ರಾಜಣ್ಣ ಮತ್ತು ನಿಹಾರಿಕಾ ಬಸ್ಸಿನ ಎಡಬದಿಗೆ ಮತ್ತು ದರ್ಶನ್ ಬಲಬದಿಗೆ ಬಿದ್ದರು. ಡಿಕ್ಕಿ ಹೊಡೆದ ಕೂಡಲೇ ಬಸ್ಸಿನ ಚಾಲಕ ಬ್ರೇಕ್ ಹಾಕಿದರೂ ಕೂಡ ದರ್ಶನ್ ಮೇಲೆ ಬಸ್ಸಿನ ಹಿಂಬದಿ ಚಕ್ರ ಹರಿದು ಸ್ಥಳದಲ್ಲಿಯೇ ಮೃತಪಟ್ಟನು. ರಾಜಣ್ಣ ಮತ್ತು ನಿಹಾರಿಕಾ ಸಣ್ಣಪುಟ್ಟ ಗಾಯಗಳಿಂದ ಪಾರಾದರು.
ಅಲ್ಲಿ ಜನ ಸೇರುತ್ತಿದ್ದಂತೆ ಬಸ್ಸಿನ ಚಾಲಕ ವಿಜಯ್ ಕುಮಾರ್ ಸ್ಥಳದಿಂದ ಪರಾರಿಯಾದರು. ನಂತರ ಚಿಕ್ಕಪೇಟೆ ಪೊಲೀಸ್ ಠಾಣೆಯಲ್ಲಿ ಪೊಲೀಸರಿಗೆ ಶರಣಾದರು. ಬಸ್ ಚಾಲಕನ ವಿರುದ್ಧ ಕೇಸು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT