ಸಾಂಕೇತಿಕ ಚಿತ್ರ 
ರಾಜ್ಯ

ಲೈಂಗಿಕ ಕಿರುಕುಳ: ಯಶವಂತಪುರ ಎಸಿಪಿ ವಿರುದ್ಧ ಪೊಲೀಸ್ ಆಯುಕ್ತರಿಗೆ ಮಹಿಳೆ ದೂರು

ಯಶವಂತಪುರ ಉಪ ವಿಭಾಗ ಎಸಿಪಿ ರವಿ ಪ್ರಸಾದ್ ತಮ್ಮ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು....

ಬೆಂಗಳೂರು: ಯಶವಂತಪುರ ಉಪ ವಿಭಾಗ ಎಸಿಪಿ ರವಿ ಪ್ರಸಾದ್ ತಮ್ಮ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಆದರೆ ಎಸಿಪಿ ರವಿ ಪ್ರಸಾದ್ ಈ ಆರೋಪವನ್ನು ನಿರಾಕರಿಸಿದ್ದು, ವಿವಾದದಲ್ಲಿ ತಮ್ಮ ಪರವಾಗಿ ನಿಲ್ಲಲು ಮಹಿಳೆ ಪೊಲೀಸರ ಮೇಲೆ ಒತ್ತಡ ಹೇರುವ ತಂತ್ರವಿದು ಎಂದು ಆಪಾದಿಸಿದ್ದಾರೆ.
ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಕಳೆದ ಶನಿವಾರ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರಿಗೆ ಎಸಿಪಿ ರವಿ ಪ್ರಸಾದ್ ವಿರುದ್ಧ ದೂರು ನೀಡಿದ್ದಾರೆ. ಅವರು ಈ ಹಿಂದೆ ಯಶವಂತಪುರ ಠಾಣೆಯಲ್ಲಿ ತಮ್ಮ ಮೇಲೆ ಇಬ್ಬರು ಪುರುಷರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ದೂರು ನೀಡಿದ್ದರು. 
ನಗರ ಪೊಲೀಸ್ ಆಯುಕ್ತರಿಗೆ ನೀಡಿದ ತಮ್ಮ 4 ಪುಟಗಳ ದೂರಿನಲ್ಲಿ ಮಹಿಳೆ, ತಾವು ಈ ಹಿಂದೆ ನೀಡಿದ್ದ ದೂರಿನ ಸಂಬಂಧ ಏನಾಯಿತೆಂದು ವಿಚಾರಿಸಲೆಂದು ಯಶವಂತಪುರ ಪೊಲೀಸ್ ಠಾಣೆಯ ಎಸಿಪಿಯವರ ಬಳಿಗೆ ನವೆಂಬರ್ 18ರಂದು ಹೋಗಿದ್ದೆ. ತಮ್ಮ ಹೇಳಿಕೆ ತೆಗೆದುಕೊಳ್ಳುವಾಗ ಎಸಿಪಿಯವರು ದೇಹದ ಖಾಸಗಿ ಅಂಗಗಳನ್ನು ತೋರಿಸುವಂತೆ ಕೇಳಿದರು. ಅದಕ್ಕೆ ತಾವು ಆಕ್ಷೇಪ ವ್ಯಕ್ತಪಡಿಸಿದಾಗ ಅಲ್ಲಿದ್ದ ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವೆಂಕಟೇಶ್ ಗೌಡ,  ಹಿರಿಯ ಪೊಲೀಸ್ ಅಧಿಕಾರಿಯವರು, ಅವರು ಹೇಳಿದ್ದನ್ನು ನೀವು ಕೇಳಬೇಕು ಎಂದು ಕಿರುಚಾಡಿದರು ಎಂದಿದ್ದಾರೆ.
ಉತ್ತರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಸಂಪರ್ಕಿಸಿ ಎಸಿಪಿ ರವಿ ಪ್ರಸಾದ್ ವಿರುದ್ಧ ದೂರು ನೀಡಲು ಮುಂದಾದಾಗ ಅವರು ನಗರ ಪೊಲೀಸ್ ಆಯುಕ್ತರನ್ನು ಸಂಪರ್ಕಿಸುವಂತೆ ಸೂಚಿಸಿದರು ಎಂದಿದ್ದಾರೆ.
ಮಹಿಳೆಯ ಆರೋಪವನ್ನು ಸಂಪೂರ್ಣ ನಿರಾಕರಿಸಿರುವ ಎಸಿಪಿ ರವಿ ಪ್ರಸಾದ್, ಮಹಿಳೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದಾಗ ನಾನು ಆಕೆಯಲ್ಲಿ ಏನಾಯಿತೆಂದು ಕೇಳಿದೆ. ಅಷ್ಟೆ, ಬೇರೆಲ್ಲಾ ವಿಷಯ ಆಕೆ ಹೇಳುತ್ತಿರುವುದು ಸುಳ್ಳು. ಆಕೆ ಆರೋಪ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳದ ಕಾರಣ, ನಮ್ಮ ಮೇಲೆ ಒತ್ತಡ ಹೇರಲು ಹೀಗೆ ನನ್ನ ಮೇಲೆ ಆಪಾದನೆ ಮಾಡುತ್ತಿದ್ದಾರೆ ಎಂದಿದ್ದಾರೆ.
ಹನುಮಂತರಾಯಪ್ಪ ಎಂಬುವವರು ಸ್ಥಾಪಿಸಿದ ಟ್ರಸ್ಟ್ ಮತ್ತು ಮಹಿಳೆ ಭಾಗಿಯಾಗಿರುವ ಇನ್ನೊಂದು ಟ್ರಸ್ಟ್ ನ ಮಧ್ಯೆ ಎರಡು ತಿಂಗಳ ಹಿಂದೆ ವಿವಾದ ನಡೆದಿತ್ತು. ಕಳೆದ 17ರಂದು ಮಹಿಳೆ ಹನುಮಂತರಾಯಪ್ಪ ವಿರುದ್ಧ ಸೋಲದೇವನಹಳ್ಳಿ ಇನ್ಸ್ ಪೆಕ್ಟರ್ ವೆಂಕಟೇಶ್ ಗೌಡ ಅವರಿಗೆ ಲೈಂಗಿಕ ಕಿರುಕುಳ ದೂರು ನೀಡಿದ್ದರು. ಅವರು ಯಶವಂತಪುರ ಎಸಿಪಿಯವರಲ್ಲಿಗೆ ಹೋಗುವಂತೆ ಸೂಚಿಸಿದರು. 
ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಮಹಿಳಾ ಪೊಲೀಸರ ಎದುರು ನಾನು ವಿಚಾರಣೆ ನಡೆಸಿದ್ದೇ ಹೊರತು ನನ್ನ ಕಚೇರಿಯಲ್ಲಲ್ಲ. ಪ್ರಕರಣಕ್ಕೆ ಸಂಬಂಧಪಟ್ಟ ವಿಷಯಗಳನ್ನು ಎಷ್ಟು ಅಗತ್ಯವಿದೆಯೊ ಅಷ್ಟು ಮಾತ್ರವೇ ಕೇಳಿದ್ದು ಎಂದು ರವಿ ಪ್ರಸಾದ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT