ಮೈಸೂರಿನಲ್ಲಿ ನಿನ್ನೆ 83ನೇ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ 
ರಾಜ್ಯ

ಕನ್ನಡದ ವೇದಿಕೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು: ಅನಂತ್ ಕುಮಾರ್

ಕನ್ನಡ ಸಾಹಿತ್ಯಕ್ಕಾಗಿ ಮೀಸಲಿರುವ ವೇದಿಕೆಯನ್ನು ಹುಸಿ ಜಾತ್ಯತೀತತೆ ಮತ್ತು ರಾಜಕೀಯ ವಿಷಯಗಳಿಗೆ ....

ಮೈಸೂರು: ಕನ್ನಡ ಸಾಹಿತ್ಯಕ್ಕಾಗಿ ಮೀಸಲಿರುವ ವೇದಿಕೆಗಳನ್ನು ಹುಸಿ ಜಾತ್ಯತೀತತೆ ಮತ್ತು ರಾಜಕೀಯ ವಿಷಯಗಳಿಗೆ ಬಳಸಿಕೊಳ್ಳಬಾರದು ಎಂದು ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ ಹೇಳಿದ್ದಾರೆ.
ರಾಜಕೀಯ ವಿಷಯಗಳನ್ನು ಮಾತನಾಡುವುದಕ್ಕೆ ಹಲವು ವೇದಿಕೆಗಳಿವೆ. ಕನ್ನಡ ರಾಜಕೀಯಕ್ಕೆ ಮೀರಿದ ಭಾಷೆ. ಇದು ಕೇವಲ ಭಾಷೆ ಮಾತ್ರವಲ್ಲ, ಜಾತ್ಯತೀತತೆ, ಮನೋಭಾವನೆ ಮತ್ತು ರಾಜ್ಯದ 6.5 ಕೋಟಿ ಕನ್ನಡಿಗರ ಆತ್ಮಸಾಕ್ಷಿಗೆ ಸಂಬಂಧಪಟ್ಟ ವಿಷಯ ಎಂದರು.
ಇಂತಹ ಸಾಹಿತ್ಯ ಸಮ್ಮೇಳನಗಳಲ್ಲಿ ನಾವು ಆದಷ್ಟು ಜಾಗರೂಕರಾಗಿರಬೇಕು ಯಾಕೆಂದರೆ ಬೇರೆ ರಾಜ್ಯಗಳು ಮತ್ತು ದೇಶಗಳಲ್ಲಿರುವ ಕನ್ನಡಿಗರಿಗೆ ಇಂತಹ ಸಾಹಿತ್ಯ ವೇದಿಕೆಗಳಿಂದ ಉತ್ತಮ ಸಂದೇಶ ಹೋಗಬೇಕು. ಇದು ಕನ್ನಡ ಭಾಷೆಯ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮೈಸೂರು ರಾಜಮನೆತನದವರಿಗೆ ವಿಶೇಷ ಗೌರವವನ್ನು ನೀಡಬೇಕಾಗಿತ್ತು. ಮೈಸೂರು ಅರಮನೆ ಆವರಣದಿಂದ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಹೊರಟು ಅದಕ್ಕೆ ಪ್ರಮೋದಾ ದೇವಿ ಮತ್ತು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಆಹ್ವಾನಿಸಬೇಕಾಗಿತ್ತು ಎಂದು ಸಚಿವ ಅನಂತ್ ಕುಮಾರ್ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT