ಬೆಂಗಳೂರು: 2017ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು. ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ಸಾಧನೆಗೈದ 40 ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಎಂ ಸಿದ್ದರಾಜು ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಒಟ್ಟು 40 ಮಂದಿಯನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ 20 ಸಾವಿರ ನಗದು, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
2017ನೇ ಸಾಲಿನ ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡಲಾಗುವ ಆಂದೋಲನ ಪ್ರಶಸ್ತಿ ಮತ್ತು ಮೂಕನಾಯಕ ಪ್ರಶಸ್ತಿಗೆ ಅಭಿಮಾನಿ ಸಂಸ್ಥೆಯ ಅರಗಿಣಿ ಪತ್ರಿಕೆ ಭಾಜನವಾಗಿದೆ. ಈ ಪತ್ರಿಕೆಗೆ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ನೀಡಲಾಗುತ್ತಿದೆ.
ಅಂತರಂಗ ಸುದ್ದಿ ಪತ್ರಿಕೆಯ ಮಾಳಪ್ಪ ಅಡಸಾರೆ, ಕರ್ನಾಟಕ ಸಂಧ್ಯಾಕಾಲ ಪತ್ರಿಕೆಯ ಶಿವಲಿಂಗಪ್ಪ, ರಾಯಚೂರು ವಾಣಿಯ ಶಿವಪ್ಪ ಮಡಿವಾಳ, ಜನಕೂಗು ಪತ್ರಿಕೆಯ ದತ್ತು ಸರ್ಕಿಲ್ ಸೇರಿದಂತೆ ಒಟ್ಟು 40 ಮಂದಿ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ ಮಾಡಲಾಗಿದೆ.
ಉಳಿದಂತೆ ಪ್ರಶಸ್ತಿ ಪುರಸ್ಕೃತ ಪತ್ರಕರ್ತರ ಪಟ್ಟಿ ಇಂತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos