ಸಂಗ್ರಹ ಚಿತ್ರ 
ರಾಜ್ಯ

ವಂಚನೆ ಪ್ರಕರಣ: ಫ್ಲಿಪ್'ಕಾರ್ಟ್ ಸ್ಥಾಪಕರ ವಿರುದ್ದ ಪ್ರಕರಣ ದಾಖಲು

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ-ಕಾಮರ್ಸ್'ನ ದಿಗ್ಗಜ ಎಂದೇ ಕರೆಸಿಕೊಳ್ಳುವ ಫ್ಲಿಪ್ ಕಾರ್ಟ್ ಸ್ಥಾಪಕರ ವಿರುದ್ದ ಸೋಮವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ...

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ-ಕಾಮರ್ಸ್'ನ ದಿಗ್ಗಜ ಎಂದೇ ಕರೆಸಿಕೊಳ್ಳುವ ಫ್ಲಿಪ್ ಕಾರ್ಟ್ ಸ್ಥಾಪಕರ ವಿರುದ್ದ ಸೋಮವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. 
ಫ್ಲಿಪ್ ಕಾರ್ಟ್ ಸ್ಥಾಪಕರು ಹಾಗೂ ನಿರ್ವಹಣಾ ಸಿಬ್ಬಂದಿ ವಿರುದ್ಧ ಇಂದಿರಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 
ಇಂದಿರಾ ನಗರದಲ್ಲಿ ಸಿ ಸ್ಟೋರ್ ನಡೆಸುತ್ತಿರುವ ನವೀನ್ ಕುಮಾರ್ ಎಂಬುವವರು ಫ್ಲಿಪ್ ಕಾರ್ಟ್ ಸ್ಥಾಪಕರಾದ ಸಚಿನ್ ಹಾಗೂ ಬಿನ್ನಿ ಬನ್ಸಾಲ್ ವಿರುದ್ಧ ದೂರು ದಾಖಲಿಸಿದ್ದಾರೆಂದು ವರದಿಗಳು ತಿಳಿಸಿವೆ. 
2015 ಜೂನ್ ಮತ್ತು 2016ರಲ್ಲಿ ಫ್ಲಿಪ್ ಕಾರ್ಟ್ ನಡುವೆ ಒಪ್ಪಂದವಾಗಿದ್ದು, ಕಂಪನಿಯ ಬಳಿ ಫ್ಲಿಪ್ ಕಾರ್ಡ್ 14,000 ಲ್ಯಾಪ್ ಟಾಪ್ ಗಳನ್ನು ಪೂರೈಕೆ ಮಾಡುವಂತೆ ತಿಳಿಸಿದೆ. ಇದರಂತೆ ಲ್ಯಾಪ್ ಟಾಪ್ ಗಳನ್ನು ಫ್ಲಿಪ್ ಕಾರ್ಟ್ ಗೆ ನೀಡಲಾಗಿತ್ತು. ಆದರೆ, ಫ್ಲಿಪ್ ಕಾರ್ಟ್ 1,480 ರಿಟರ್ನ್ಡ್ ವಸ್ತುಗಳಿಗೆ ಮಾತ್ರ ಹಣವನ್ನು ನೀಡಿದೆ. ಇತರೆ ಲ್ಯಾಪ್ ಟಾಪ್ ಗಳು ಹಾಗೂ ಅದರ ಶಿಪ್ಪಿಂಗ್, ಟಿಡಿಎಸ್ ಶುಲ್ಕಗಳನ್ನು ನೀಡಿಲ್ಲ. ಹಣವನ್ನು ನೀಡದೆ ಫ್ಲಿಪ್ ಕಾರ್ಟ್ ವಂಚಿಸಿದೆ ಎಂದು ನವೀನ್ ಅವರು ದೂರಿನಲ್ಲಿ ಹೇಳಿಕೊಂಡಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ದಾಖಲೆಗಳನ್ನು ನೀಡುವಂತೆ ತಿಳಿಸಲಾಗಿದೆ. ದಾಖಲೆಗಳು ನೀಡಿದ ಬಳಿಕ ಫ್ಲಿಪ್ ಕಾರ್ಟ್'ಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT