ಸಂಗ್ರಹ ಚಿತ್ರ 
ರಾಜ್ಯ

ವಂಚನೆ ಪ್ರಕರಣ: ಫ್ಲಿಪ್'ಕಾರ್ಟ್ ಸ್ಥಾಪಕರ ವಿರುದ್ದ ಪ್ರಕರಣ ದಾಖಲು

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ-ಕಾಮರ್ಸ್'ನ ದಿಗ್ಗಜ ಎಂದೇ ಕರೆಸಿಕೊಳ್ಳುವ ಫ್ಲಿಪ್ ಕಾರ್ಟ್ ಸ್ಥಾಪಕರ ವಿರುದ್ದ ಸೋಮವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ...

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ-ಕಾಮರ್ಸ್'ನ ದಿಗ್ಗಜ ಎಂದೇ ಕರೆಸಿಕೊಳ್ಳುವ ಫ್ಲಿಪ್ ಕಾರ್ಟ್ ಸ್ಥಾಪಕರ ವಿರುದ್ದ ಸೋಮವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. 
ಫ್ಲಿಪ್ ಕಾರ್ಟ್ ಸ್ಥಾಪಕರು ಹಾಗೂ ನಿರ್ವಹಣಾ ಸಿಬ್ಬಂದಿ ವಿರುದ್ಧ ಇಂದಿರಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 
ಇಂದಿರಾ ನಗರದಲ್ಲಿ ಸಿ ಸ್ಟೋರ್ ನಡೆಸುತ್ತಿರುವ ನವೀನ್ ಕುಮಾರ್ ಎಂಬುವವರು ಫ್ಲಿಪ್ ಕಾರ್ಟ್ ಸ್ಥಾಪಕರಾದ ಸಚಿನ್ ಹಾಗೂ ಬಿನ್ನಿ ಬನ್ಸಾಲ್ ವಿರುದ್ಧ ದೂರು ದಾಖಲಿಸಿದ್ದಾರೆಂದು ವರದಿಗಳು ತಿಳಿಸಿವೆ. 
2015 ಜೂನ್ ಮತ್ತು 2016ರಲ್ಲಿ ಫ್ಲಿಪ್ ಕಾರ್ಟ್ ನಡುವೆ ಒಪ್ಪಂದವಾಗಿದ್ದು, ಕಂಪನಿಯ ಬಳಿ ಫ್ಲಿಪ್ ಕಾರ್ಡ್ 14,000 ಲ್ಯಾಪ್ ಟಾಪ್ ಗಳನ್ನು ಪೂರೈಕೆ ಮಾಡುವಂತೆ ತಿಳಿಸಿದೆ. ಇದರಂತೆ ಲ್ಯಾಪ್ ಟಾಪ್ ಗಳನ್ನು ಫ್ಲಿಪ್ ಕಾರ್ಟ್ ಗೆ ನೀಡಲಾಗಿತ್ತು. ಆದರೆ, ಫ್ಲಿಪ್ ಕಾರ್ಟ್ 1,480 ರಿಟರ್ನ್ಡ್ ವಸ್ತುಗಳಿಗೆ ಮಾತ್ರ ಹಣವನ್ನು ನೀಡಿದೆ. ಇತರೆ ಲ್ಯಾಪ್ ಟಾಪ್ ಗಳು ಹಾಗೂ ಅದರ ಶಿಪ್ಪಿಂಗ್, ಟಿಡಿಎಸ್ ಶುಲ್ಕಗಳನ್ನು ನೀಡಿಲ್ಲ. ಹಣವನ್ನು ನೀಡದೆ ಫ್ಲಿಪ್ ಕಾರ್ಟ್ ವಂಚಿಸಿದೆ ಎಂದು ನವೀನ್ ಅವರು ದೂರಿನಲ್ಲಿ ಹೇಳಿಕೊಂಡಿದ್ದಾರೆ. 
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ದಾಖಲೆಗಳನ್ನು ನೀಡುವಂತೆ ತಿಳಿಸಲಾಗಿದೆ. ದಾಖಲೆಗಳು ನೀಡಿದ ಬಳಿಕ ಫ್ಲಿಪ್ ಕಾರ್ಟ್'ಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT