ಭೀಮಗಡ ಅಭಯಾರಣ್ಯದೊಳಗೆ ಹೋಗುವ ರಸ್ತೆ 
ರಾಜ್ಯ

ವನ್ಯಜೀವಿ ಮಂಡಳಿ ಸದಸ್ಯರಿಗೆ ಸಂರಕ್ಷಿತ ಅರಣ್ಯದೊಳಗೆ ಖಾಸಗಿ ವಾಹನ ಬಳಕೆಗೆ ಸರ್ಕಾರ ಅನುಮತಿ

ಅರಣ್ಯಾಧಿಕಾರಿಗಳು, ವನ್ಯಜೀವಿ ತಜ್ಞರು ಮತ್ತು ಕಾರ್ಯಕರ್ತರ ವಿರೋಧವಿದ್ದರೂ ಕೂಡ ನೋಂದಣಿಯಾಗಿರುವ ವನ್ಯಜೀವಿ ಮಂಡಳಿ .....

ಬೆಂಗಳೂರು: ಅರಣ್ಯಾಧಿಕಾರಿಗಳು, ವನ್ಯಜೀವಿ ತಜ್ಞರು ಮತ್ತು ಕಾರ್ಯಕರ್ತರ ವಿರೋಧವಿದ್ದರೂ ಕೂಡ ವನ್ಯಜೀವಿ ಮಂಡಳಿ  ಸದಸ್ಯರು ಮತ್ತು ವನ್ಯ ಪಾಲಕರಿಗೆ ತಮ್ಮ  ಖಾಸಗಿ  ವಾಹನಗಳನ್ನು ಹುಲಿ ಸಂರಕ್ಷಿತ  ಅರಣ್ಯ, ವನ್ಯಮೃಗ ಅಭಯಾರಣ್ಯ ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ತೆಗೆದುಕೊಂಡು ಹೋಗಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕಳೆದ 10 ರಂದು  ನೀಡಿದ ಆದೇಶದಲ್ಲಿ ವನ್ಯಜೀವಿ ಪಾಲಕರ ಮುಖ್ಯಸ್ಥರು ಸಹಿ ಹಾಕಿದ್ದು, ಅದರಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಆದೇಶದಂತೆ ಅರಣ್ಯದ ರಕ್ಷಿತ ಪ್ರದೇಶದಲ್ಲಿ ವನ್ಯಜೀವಿ ಉದ್ಯಾನವನ ಪಾಲಕರು ಮತ್ತು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಿಗೆ ಅರಣ್ಯದೊಳಗೆ ಹೋಗಲು ಅನುಮತಿ ನೀಡಲಾಗಿದೆ.

ಆದರೆ ಸರ್ಕಾರದ ಈ ಆದೇಶ ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ಮತ್ತು ತಜ್ಞರಿಗೆ ಇಷ್ಟವಾಗಿಲ್ಲ. ನಾವು ಅನುಮತಿ ನೀಡಿರುವುದನ್ನು ವಿರೋಧಿಸುವುದಿಲ್ಲ. ಆದರೆ ವನ್ಯಜೀವಿ ಮಂಡಳಿ ಸದಸ್ಯರು ಮತ್ತು  ಪಾಲಕರಾಗಿ  ನೇಮಕಗೊಂಡಿರುವವರ ಬಗ್ಗೆ ಕಳವಳವಿದೆ. ಇಂದು ರಿಯಲ್ ಎಸ್ಟೇಟ್ ಉದ್ಯಮಿಗಳು, ವನ್ಯಜೀವಿ ಬೇಟೆಗಾರರು ಮಂಡಳಿಯ ಸದಸ್ಯರಾಗುತ್ತಿದ್ದು ಅರಣ್ಯದೊಳಗೆ ಹೋಗಿ ಯಾವುದೇ ಭಯವಿಲ್ಲದೆ ತಮ್ಮಿಷ್ಟ ಬಂದಂತೆ ವರ್ತಿಸುತ್ತಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT