ಬಿಜೆಪಿ ಮುಖಂಡ ಯೋಗೇಶ್ ಗೌಡ 
ರಾಜ್ಯ

ಯೋಗೇಶ್ ಗೌಡ ಹತ್ಯೆ ಪ್ರಕರಣ: ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರ ಆಗ್ರಹ

ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ಹಾಗೂ ಡಿವೈಎಸ್ಪಿ ತಳಜಪ್ಪ ಸುಲ್ಫಿ ಮತ್ತು ಬಿಪಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರು ಬುಧವಾರ ಆಗ್ರಹಿಸಿದ್ದಾರೆ...

ಧಾರವಾಡ: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ಹಾಗೂ ಡಿವೈಎಸ್ಪಿ ತುಳಜಪ್ಪ ಸುಲ್ಫಿ ಮತ್ತು ಬಿಪಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರು ಬುಧವಾರ ಆಗ್ರಹಿಸಿದ್ದಾರೆ. 
ಹತ್ಯೆ ಪ್ರಕರಣ ಸಂಬಂಧ ಸಚಿವ ವಿನಯ್ ಕುಲರ್ಣಿ ಹಾಗೂ ಡಿವೈಎಸ್ಪಿ ನಮ್ಮ ಮೇಲೆ ಒತ್ತಡ ಹೇರುತ್ತಿದ್ದು, ಅಧಿಕಾರಿ ಹಾಗೂ ಸಚಿವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಹತ್ಯೆಯಾದ ಯೋಗೇಶ್ ಅವರ ಸಹೋದರ ಗುರುನಾಥ್ ಗೌಡ ಅವರು ಧಾರವಾಡ ಎಸ್ಪಿ ಸಂಗೀತಾ ಪೀ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. 
ಪ್ರಕರಣ ಸಂಬಂಧ ನಿನ್ನೆ ಧಾರವಾಡ ಎಸ್ಪಿ ಸಂಗೀತಾ ಅವರ ಕಚೇರಿಗೆ ಭೇಟಿ ನೀಡಿರುವ ಗುರುನಾಥ್ ಗೌಡ ಅವರು ಅಧಿಕಾರಿಗಳು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 
ಗುರುನಾಥ್ ಗೌಡ ಹಾಗೂ ಮಲ್ಲಮ್ಮ ಎಂಬುವವರು ಪ್ರಕರಣ ಸಂಬಂಧ ತಮ್ಮನ್ನು ಭೇಟಿ ಮಾಡಿದ್ದು, ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆಂದು ಎಸ್'ಪಿ ಸಂಗೀತಾ ಅವರು ಹೇಳಿದ್ದಾರೆ. 
ಕಳೆದ ವರ್ಷ ಜೂನ್ 15ರಂದು ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಅವರನ್ನು ಅವರ ಜಿಮ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT