ಮದ್ರಾಸ 
ರಾಜ್ಯ

50 ಕೋಟಿ ವೆಚ್ಚದಲ್ಲಿ ರಾಜ್ಯದ ಕೆಲ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ!

ಆಧುನೀಕರಣ ಯೋಜನೆ ಅಡಿಯಲ್ಲಿ 50 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿನ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ ಕಲ್ಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ...

ಬೆಂಗಳೂರು: ಆಧುನೀಕರಣ ಯೋಜನೆ ಅಡಿಯಲ್ಲಿ 50 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿನ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ ಕಲ್ಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮುಂದಾಗಿದೆ. 
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಔಪಚಾರಿಕ ಮತ್ತು ಆಧುನಿಕ ಶಿಕ್ಷಣವನ್ನು ಪರಿಚಯಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮದ್ರಾಸಗಳಿಗೆ ಕಂಪ್ಯೂಟರ್ ಗಳನ್ನು ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಇಲಾಖೆ 7 ಮದ್ರಾಸಗಳನ್ನು ಆಯ್ಕೆ ಮಾಡಿದ್ದು ಪ್ರತಿ ಮದ್ರಾಸಗಳಿಗೆ 6 ರಿಂದ 10 ಲಕ್ಷದವರೆಗೆ ಹಣ ಬಿಡುಗಡೆ ಮಾಡಲಾಗುತ್ತದೆ. 
ಮುಸ್ಲಿಂ ಸಮುದಾಯಕ್ಕೆ ಸೇರಿದ ಮಕ್ಕಳು ಹೆಚ್ಚಾಗಿ  ಮದ್ರಸಾಗಳಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದು ಅವರು ಔಪಚಾರಿಕ ಮತ್ತು ಆಧುನಿಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮದ್ರಾಸಗಳಲ್ಲಿ ಅಗತ್ಯವಿರುವ ಆಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಈ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಈ ಯೋಜನೆಯು ಗುರಿ ಹೊಂದಿದೆ ಎಂದು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
ಒಟ್ಟಾರೆ 150 ಮದ್ರಾಸಗಳಿಂದ ಅರ್ಜಿಗಳು ಬಂದಿದ್ದು ಇದರಲ್ಲಿ 70 ಮದ್ರಾಸಗಳನ್ನು ಪಟ್ಟಿ ಮಾಡಲಾಗಿದೆ. ಅಲ್ಲದೆ ಮದ್ರಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಜಿಸಲಾಗಿದೆ. ಕನಿಷ್ಠ 25 ವಿದ್ಯಾರ್ಥಿಗಳನ್ನು ಹೊಂದಿರುವ ಮದ್ರಾಸಗಳಿಗೆ ಈ ಯೋಜನೆ ಅನ್ವಯಿಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ