ಮದ್ರಾಸ 
ರಾಜ್ಯ

50 ಕೋಟಿ ವೆಚ್ಚದಲ್ಲಿ ರಾಜ್ಯದ ಕೆಲ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ!

ಆಧುನೀಕರಣ ಯೋಜನೆ ಅಡಿಯಲ್ಲಿ 50 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿನ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ ಕಲ್ಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ...

ಬೆಂಗಳೂರು: ಆಧುನೀಕರಣ ಯೋಜನೆ ಅಡಿಯಲ್ಲಿ 50 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿನ ಮದ್ರಾಸಗಳಿಗೆ ಕಂಪ್ಯೂಟರ್ ಭಾಗ್ಯ ಕಲ್ಪಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮುಂದಾಗಿದೆ. 
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಔಪಚಾರಿಕ ಮತ್ತು ಆಧುನಿಕ ಶಿಕ್ಷಣವನ್ನು ಪರಿಚಯಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮದ್ರಾಸಗಳಿಗೆ ಕಂಪ್ಯೂಟರ್ ಗಳನ್ನು ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಇಲಾಖೆ 7 ಮದ್ರಾಸಗಳನ್ನು ಆಯ್ಕೆ ಮಾಡಿದ್ದು ಪ್ರತಿ ಮದ್ರಾಸಗಳಿಗೆ 6 ರಿಂದ 10 ಲಕ್ಷದವರೆಗೆ ಹಣ ಬಿಡುಗಡೆ ಮಾಡಲಾಗುತ್ತದೆ. 
ಮುಸ್ಲಿಂ ಸಮುದಾಯಕ್ಕೆ ಸೇರಿದ ಮಕ್ಕಳು ಹೆಚ್ಚಾಗಿ  ಮದ್ರಸಾಗಳಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದು ಅವರು ಔಪಚಾರಿಕ ಮತ್ತು ಆಧುನಿಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮದ್ರಾಸಗಳಲ್ಲಿ ಅಗತ್ಯವಿರುವ ಆಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಈ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಈ ಯೋಜನೆಯು ಗುರಿ ಹೊಂದಿದೆ ಎಂದು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
ಒಟ್ಟಾರೆ 150 ಮದ್ರಾಸಗಳಿಂದ ಅರ್ಜಿಗಳು ಬಂದಿದ್ದು ಇದರಲ್ಲಿ 70 ಮದ್ರಾಸಗಳನ್ನು ಪಟ್ಟಿ ಮಾಡಲಾಗಿದೆ. ಅಲ್ಲದೆ ಮದ್ರಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಜಿಸಲಾಗಿದೆ. ಕನಿಷ್ಠ 25 ವಿದ್ಯಾರ್ಥಿಗಳನ್ನು ಹೊಂದಿರುವ ಮದ್ರಾಸಗಳಿಗೆ ಈ ಯೋಜನೆ ಅನ್ವಯಿಸಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT