ಸಂಗ್ರಹ ಚಿತ್ರ 
ರಾಜ್ಯ

ಮೆಜೆಸ್ಟಿಕ್ ಸುತ್ತಮುತ್ತಲಿನ ಹೋಟೆಲ್‌ ಗಳು ಇನ್ಮುಂದೆ 24/7 ತೆರೆಯಬಹುದು!

ರಾಜಧಾನಿ ಬೆಂಗಳೂರಿನ ಬಸ್ ಮತ್ತು ರೈಲು ನಿಲ್ದಾಣಗಳಲ್ಲಿ ಇನ್ನು ಮುಂದೆ 24 ಗಂಟೆಯೂ ಹೊಟೆಲ್ ಮತ್ತು ರೆಸ್ಟೋರೆಂಟ್ ಗಳು ಕಾರ್ಯ ನಿರ್ವಹಿಸಲಿವೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಬಸ್ ಮತ್ತು ರೈಲು ನಿಲ್ದಾಣಗಳಲ್ಲಿ ಇನ್ನು ಮುಂದೆ 24 ಗಂಟೆಯೂ ಹೊಟೆಲ್ ಮತ್ತು ರೆಸ್ಟೋರೆಂಟ್ ಗಳು ಕಾರ್ಯ ನಿರ್ವಹಿಸಲಿವೆ.
ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರು ಹೊಸ ಆದೇಶ ನೀಡಿದ್ದು, ನಗರದ ಮೆಜೆಸ್ಟಿಕ್‌ ನ ಕೆಂಪೇಗೌಡ ಬಸ್‌ ನಿಲ್ದಾಣ ಹಾಗೂ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಗಳಲ್ಲಿ ದಿನದ 24 ಗಂಟೆಯೂ ಪ್ರಯಾಣಿಕರ ದಟ್ಟಣೆ  ಇರುವುದರಿಂದ, ಆ ನಿಲ್ದಾಣಗಳ ಹೋಟೆಲ್‌ ಗಳಿಗೆ ದಿನದ 24 ಗಂಟೆಯೂ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. 
ಪ್ರಸ್ತುತ ಇರುವ ನಿಯಮದಂತೆ ರಾತ್ರಿ 1ಗಂಟೆಗೆ ಎಲ್ಲ ಬಗೆಯ ಹೋಟೆಲ್‌ ಗಳನ್ನು ಬಂದ್‌ ಮಾಡಲಾಗುತ್ತಿತ್ತು. ಹೀಗಾಗಿ ತಡರಾತ್ರಿ ನಿಲ್ದಾಣದಲ್ಲಿ ಬಸ್‌ ಹಾಗೂ ರೈಲುಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಆಹಾರ ಸಿಗುತ್ತಿರಲಿಲ್ಲ.  ಇದೇ ಕಾರಣಕ್ಕೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಟಿ.ಸುನೀಲ್‌ ಕುಮಾರ್‌ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚರ್ಚಿಸಲು ನಗರ ಪೊಲೀಸ್‌ ಕಮಿಷನರ್‌ ಅವರನ್ನು  ಭೇಟಿಯಾಗಿದ್ದ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು, ಬಸ್‌ ನಿಲ್ದಾಣದ ಹೋಟೆಲ್‌ ಗಳಿಗಾದರೂ ದಿನದ 24 ಗಂಟೆ ವಹಿವಾಟು ನಡೆಸಲು ಅನುಮತಿ ನೀಡುವಂತೆ ಕೋರಿದ್ದರು. ಅದಕ್ಕೆ ಸ್ಪಂದಿಸಿರುವ ಸುನಿಲ್  ಕುಮಾರ್ ಅವರು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಯುಕ್ತ ಟಿ ಸುನಿಲ್ ಕುಮಾರ್ ಅವರು, ದರ್ಶಿನಿಗಳಿಗೆ ಮಾತ್ರ ಅನ್ವಯ: ‘ಪ್ರಯಾಣಿಕರಿಗೆ ದಿನದ 24 ಗಂಟೆಯೂ ಆಹಾರ ಸಿಗಬೇಕು ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದ್ದೇವೆ. ಇದು  ದರ್ಶಿನಿಗಳಿಗೆ ಮಾತ್ರ ಅನ್ವಯವಾಗಲಿದೆ. ಪಂಚತಾರಾ ಹೋಟೆಲ್‌ ಸೇರಿ ಇತರೆ ಹೋಟೆಲ್‌ಗಳಿಗೆ ಅನ್ವಯಿಸುವುದಿಲ್ಲ. ಅಂತೆಯೇ ಸಮಯದ ನಿರ್ಬಂಧ ಬಗ್ಗೆ ಹೋಟೆಲ್‌ ಮಾಲೀಕರು ಹಾಗೂ ಸಿಬ್ಬಂದಿ ಮೇಲೆ ಕ್ರಮ ಜರುಗಿಸದಂತೆ  ಪೊಲೀಸರಿಗೆ ಸೂಚಿಸಿದ್ದೇನೆ. ಆದರೂ ಯಾರಾದರೂ ಕಿರುಕುಳ ನೀಡಿದರೆ, ಹೋಟೆಲ್‌ ಮಾಲೀಕರು ದೂರು ನೀಡಬಹುದು.  ಆದರೆ ದರ್ಶಿನಿಗಳು ಮದ್ಯ ಮಾರಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT