ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗ್ಡೆ ಅ.03 ರಂದು ರಾತ್ರಿ ನಿಧನರಾಗಿದ್ದಾರೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಟ್ಟಾಣಿ ರಾಮಚಂದ್ರ ಹೆಗ್ಡೆ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ, ಬಹು ಅಂಗಾಂಗ ವೈಫಲ್ಯದಿಂದ ಚಿಟ್ಟಾನಿ ನಿಧನರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಿಟ್ಟಾಣಿಯಲ್ಲಿ 1933 ರ ಜನವರಿ 1 ರಂದು ಜನಿಸಿದ್ದರು, ಬಾಲ್ಯದಲ್ಲಿಯೇ ಯಕ್ಷಗಾನ ರಂಗ ಪ್ರವೇಶಿಸಿದ್ದ ಚಿಟ್ಟಾಣಿ ಯಕ್ಷಗಾನದಲ್ಲಿ ಬಹುದೊಡ್ಡ ಪ್ರೇಕ್ಷಕ ವರ್ಗವನ್ನು ಹೊಂದಿದ್ದು, ಯಕ್ಷಗಾನಕ್ಕೆ ಮೊದಲ ಪದ್ಮಶ್ರೀ ಪ್ರಶಸ್ತಿ ತಂದುಕೊಟ್ಟ ಕೀರ್ತಿಗೂ ಚಿಟ್ಟಾಣಿ ಭಾಜನರಾಗಿದ್ದಾರೆ.