ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕಕ್ಕೂ ಕಾಲಿಟ್ಟ ಇಸಿಸ್ ಸಂಘಟನೆ?: ವೈರಲ್ ಆಯ್ತು ಮೌಲ್ವಿಯ ಭಾಷಣದ ಆಡಿಯೋ ಟೇಪ್

ವಿಶ್ವದ ಶ್ರೀಮಂತ ಉಗ್ರ ಸಂಘಟನೆ ಎಂಬ ಕುಖ್ಯಾತಿ ಪಡೆದಿರುವ ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಮತ್ತು ಸಿರಿಯಾ (ಇಸಿಸ್) ಉಗ್ರ ಸಂಘಟನೆ ಕರ್ನಾಟಕದೊಂದಿಗೂ ನಂಟು ಹೊಂದಿರುವ ಕುರಿತು ಶಂಕೆ ವ್ಯಕ್ತವಾಗಿದೆ.

ಮಂಗಳೂರು: ವಿಶ್ವದ ಶ್ರೀಮಂತ ಉಗ್ರ ಸಂಘಟನೆ ಎಂಬ ಕುಖ್ಯಾತಿ ಪಡೆದಿರುವ ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಮತ್ತು ಸಿರಿಯಾ (ಇಸಿಸ್) ಉಗ್ರ ಸಂಘಟನೆ ಕರ್ನಾಟಕದೊಂದಿಗೂ ನಂಟು ಹೊಂದಿರುವ ಕುರಿತು ಶಂಕೆ  ವ್ಯಕ್ತವಾಗಿದೆ.
ಆಡಿಯೋ ಟೇಪ್ ಒಂದು ಇಂತಹುದೊಂದು ಆತಂಕ ಕಾರಣವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐಸಿಸ್‌ ಮಾದರಿಯಲ್ಲಿ ಯುವಕರ ಗುಂಪೊಂದು ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ  ಹರಿದಾಡುತ್ತಿದೆ. ಮೂಲಗಳ ಪ್ರಕಾರ ಮಂಗಳೂರಿನ ಸಂಘಟನೆಯೊಂದರ ಮುಖಂಡರು ಬ್ಯಾರಿ ಭಾಷೆಯಲ್ಲಿ ಮಾತನಾಡಿದ ಆಡಿಯೋ ತುಣುಕು ಈಗ ವಿವಾದದ ಕೇಂದ್ರ ಬಿಂದುವಾಗಿದ್ದು, ವಿಡಿಯೋದಲ್ಲಿ ಇಸಿಸ್ ಉಗ್ರ ಸಂಘಟನೆ  ಕುರಿತಂತೆ ಮೌಲ್ವಿಗಳು ಮಾತನಾಡಿದ್ದಾರೆ ಎನ್ನಲಾಗಿದೆ.

ಈ ವಿಚಾರ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೀಡಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಆಡಿಯೋದಲ್ಲಿ  ಮಂಗಳೂರಿನ ಯುವಕರ ಗುಂಪೊಂದು ಸಿದ್ಧಾಂತವೊಂದರಿಂದ ಪ್ರಭಾವಿತರಾಗಿ ಈ ರೀತಿ ಸಂಘಟನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಅಂತೆಯೇ ಐಸಿಸ್‌ ಮಾದರಿಯ ಕಪ್ಪು ಮತ್ತು ಕಂದು ಬಣ್ಣದ ಗೌನ್‌ ಹಾಕುತ್ತಿರುವ ಈ ಯುವಕರಲ್ಲಿ ಎಂಜಿನಿಯರ್‌ ಓದಿದ ಯುವಕರೂ ಇದ್ದಾರೆ. ಮಂಗಳೂರು ನಗರ ಮತ್ತು ಬಿ.ಸಿ.ರೋಡ್‌ಗಳಲ್ಲಿ ಇವರು ರಹಸ್ಯ ಕಾರ್ಯಾಚರಣೆ  ನಡೆಸುತ್ತಿದ್ದಾರೆ ಎಂದು ಆಡಿಯೋದಲ್ಲಿ ಹೇಳಲಾಗಿದೆ. ಆಡಿಯೋದಲ್ಲಿ ಬಿ.ಸಿ.ರೋಡ್‌, ಕಲ್ಲಡ್ಕ, ಮಾರಿಪಳ್ಳ, ಉಳ್ಳಾಲದಲ್ಲಿ ಇಂತಹ ಯುವಕರಿದ್ದಾರೆ. ಈ ಗುಂಪು ಯಮೆನ್‌ ದೇಶದಲ್ಲಿರುವ ಉಗ್ರ ಕೇಂದ್ರಕ್ಕೆ ವಲಸೆ ಹೋಗುವ ಉದ್ದೇಶ  ಹೊಂದಿದ್ದಾರೆ ಎಂದು ಆಡಿಯೋದಲ್ಲಿ ಹೇಳಲಾಗಿದೆ.

ಈಗ್ಗೆ 2 ವರ್ಷಗಳಿಂದ ಕಾಸರಗೋಡು ಜಿಲ್ಲೆಯ ಪಡನ್ನಾ ಗ್ರಾಮದಲ್ಲಿ ಕೆಲವು ಯುವಕರು ದಿಢೀರ್‌ ನಾಪತ್ತೆಯಾಗಿ ಐಸಿಎಸ್‌ ಉಗ್ರ ಸಂಘಟನೆಗೆ ಸೇರಿದ್ದಾರೆ ಎಂಬ ಗಂಭೀರ ಸಂಗತಿ ವರ್ಷದ ಹಿಂದೆ ಭಾರಿ ಕೋಲಾಹಲಕ್ಕೆ  ಕಾರಣವಾಗಿತ್ತು.
ಆದರೆ ಈ ವರೆಗೂ ಪೊಲೀಸರು ಈ ಆಡಿಯೋ ಟೇಪ್ ನ ಸತ್ಯಾಸತ್ಯತೆ ಕುರಿತು ಸ್ಪಷ್ಟನೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel