ಗೀತಾ ವಿಷ್ಣು 
ರಾಜ್ಯ

ಅಪಘಾತ ಪ್ರಕರಣ: 5 ದಿನಗಳ ನಂತರ ಸಿಸಿಬಿ ಪೊಲೀಸರಿಂದ ಗೀತಾ ವಿಷ್ಣು ಬಂಧನ

ಕಾರು ಅಪಘಾತ ಎಸಗಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಉದ್ಯಮಿ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುವನ್ನು ಸಿಸಿಬಿ ಪೊಲೀಸರು ಮಂಗಳವಾರ ...

ಬೆಂಗಳೂರು: ಕಾರು ಅಪಘಾತ ಎಸಗಿ  ಆಸ್ಪತ್ರೆಯಿಂದ ಪರಾರಿಯಾಗಿದ್ದ ಉದ್ಯಮಿ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುವನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಗೀತಾ ವಿಷ್ಣು ಬಂಧನವನ್ನು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಚಾರಣೆ ನಂತರ ಮತ್ತಷ್ಟು ಮಾಹಿತಿಗಳನ್ನು ಬಹಿರಂಗ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಸಿಸಿಬಿ ಎಸಿಪಿ ಎದುರು ಗೀತಾ ವಿಷ್ಣು ಶರಣಾಗಿರುವುದಾಗಿ ಮೂಲಗಳು ತಿಳಿಸಿವೆ. ಯಾರೋ ಒಬ್ಬರು ಟೆಲಿಫೋನ್ ಬೂತ್ ನಿಂದ ಕರೆ ಮಾಡಿ ವಿಷ್ಣು ಇರುವ ಸ್ಥಳದ ಮಾಹಿತಿ ನೀಡಿದರು. ಕರೆ ಮಾಡಿದ ವ್ಯಕ್ತಿ ಗೀತಾ ವಿಷ್ಣುವೇ ಆಗಿದ್ದಾನೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಬುಧವಾರ ಮಧ್ಯಾಹ್ನದ ನಂತರ ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು.
ಕಳೆದ ಸೆಪ್ಟಂಬರ್ 28 ರಂದು ಸೌತ್ ಎಂಡ್ ಸರ್ಕಲ್ ನಲ್ಲಿ  ಕಾರು ಅಪಘಾತ ಮಾಡಿದ ಬಳಿಕ ವಿಷ್ಣು ಆಸ್ಪತ್ರೆಗೆ ದಾಖಲಾಗಿದ್ದ.  ಆತನ ಕಾರಿನಲ್ಲಿ ಪೊಲೀಸರು 300 ಗ್ರಾಂ  ಗಾಂಜಾ ವಶ ಪಡಿಸಿಕೊಂಡಿದ್ದರು.  ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಆತ ಶುಕ್ರವಾರ ಬೆಳಗ್ಗೆ ಅಲ್ಲಿಂದ ಪರಾರಿಯಾಗಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT