ಗೀತಾ ವಿಷ್ಣು 
ರಾಜ್ಯ

ಅಪಘಾತ ಪ್ರಕರಣ: 5 ದಿನಗಳ ನಂತರ ಸಿಸಿಬಿ ಪೊಲೀಸರಿಂದ ಗೀತಾ ವಿಷ್ಣು ಬಂಧನ

ಕಾರು ಅಪಘಾತ ಎಸಗಿ ಆಸ್ಪತ್ರೆಯಿಂದ ಪರಾರಿಯಾಗಿದ್ದ ಉದ್ಯಮಿ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುವನ್ನು ಸಿಸಿಬಿ ಪೊಲೀಸರು ಮಂಗಳವಾರ ...

ಬೆಂಗಳೂರು: ಕಾರು ಅಪಘಾತ ಎಸಗಿ  ಆಸ್ಪತ್ರೆಯಿಂದ ಪರಾರಿಯಾಗಿದ್ದ ಉದ್ಯಮಿ ಆದಿಕೇಶವಲು ಮೊಮ್ಮಗ ಗೀತಾ ವಿಷ್ಣುವನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಗೀತಾ ವಿಷ್ಣು ಬಂಧನವನ್ನು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಚಾರಣೆ ನಂತರ ಮತ್ತಷ್ಟು ಮಾಹಿತಿಗಳನ್ನು ಬಹಿರಂಗ ಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಸಿಸಿಬಿ ಎಸಿಪಿ ಎದುರು ಗೀತಾ ವಿಷ್ಣು ಶರಣಾಗಿರುವುದಾಗಿ ಮೂಲಗಳು ತಿಳಿಸಿವೆ. ಯಾರೋ ಒಬ್ಬರು ಟೆಲಿಫೋನ್ ಬೂತ್ ನಿಂದ ಕರೆ ಮಾಡಿ ವಿಷ್ಣು ಇರುವ ಸ್ಥಳದ ಮಾಹಿತಿ ನೀಡಿದರು. ಕರೆ ಮಾಡಿದ ವ್ಯಕ್ತಿ ಗೀತಾ ವಿಷ್ಣುವೇ ಆಗಿದ್ದಾನೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಬುಧವಾರ ಮಧ್ಯಾಹ್ನದ ನಂತರ ಆತನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುವುದು.
ಕಳೆದ ಸೆಪ್ಟಂಬರ್ 28 ರಂದು ಸೌತ್ ಎಂಡ್ ಸರ್ಕಲ್ ನಲ್ಲಿ  ಕಾರು ಅಪಘಾತ ಮಾಡಿದ ಬಳಿಕ ವಿಷ್ಣು ಆಸ್ಪತ್ರೆಗೆ ದಾಖಲಾಗಿದ್ದ.  ಆತನ ಕಾರಿನಲ್ಲಿ ಪೊಲೀಸರು 300 ಗ್ರಾಂ  ಗಾಂಜಾ ವಶ ಪಡಿಸಿಕೊಂಡಿದ್ದರು.  ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಆತ ಶುಕ್ರವಾರ ಬೆಳಗ್ಗೆ ಅಲ್ಲಿಂದ ಪರಾರಿಯಾಗಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT