ಶಶಿಕಲಾ 
ರಾಜ್ಯ

ಜೈಲು ಶಿಕ್ಷೆಯಲ್ಲಿರುವ ಎಐಎಡಿಎಂಕೆ ನಾಯಕಿ ಶಶಿಕಲಾಗೆ ಐದು ದಿನಗಳ ಪೆರೋಲ್

ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್...

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್ ನೀಡಿದೆ.
ತಮಿಳುನಾಡು ಸರ್ಕಾರದ ಶಿಫಾರಸಿನ ಮೇರೆಗೆ ಅನಾರೋಗ್ಯ ಪೀಡಿತ ಪತಿಯ ಭೇಟಿಗಾಗಿ ಆದು ದಿನಗಳ ಪೆರೋಲ್ ನೀಡಲಾಗಿದೆ ಎಂದು ಜೈಲಿನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 
ಕೆಲವು ಷರತ್ತುಗಳ ಮೇಲೆ ಶಶಿಕಲಾ ಅವರಿಗೆ ಪೆರೋಲ್ ನೀಡಲಾಗಿದೆ ಎಂದು ಶಶಿಕಲಾ ಪರ ವಕೀಲ ಕೃಷ್ಣಪ್ಪನ್ ತಿಳಿಸಿದ್ದಾರೆ. 
ಶಶಿಕಲಾ ಅವರನ್ನು ಕರೆದೊಯ್ಯಲು ಅವರ  ಆಪ್ತ ಸಂಬಂಧಿ ಟಿಟಿವಿ ದಿನಕರನ್ ಗುರುವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದಾರೆ. ಪೆರೋಲ್ ಮೇಲೆ ಬಿಡುಗಡೆಗೊಳ್ಳುವ ಶಶಿಕಲಾ ಅವರನ್ನು ನೋಡಲು ಅವರ ಸುಮಾರು 500 ಬೆಂಬಲಿಗರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುವ ಸಾಧ್ಯತೆಯಿದೆ.
ಶಶಿಕಲಾ ಅವರನ್ನು ಪೆರೋಲ್ ಮೇಲೆ ಬಿಡುಗಡೆ ಗೊಳಿಸಲು ತಮಿಳುನಾಡು ಪೊಲೀಸರಿಂದ ಎನ್ ಒಸಿಗಾಗಿ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಕಾಯುತ್ತಿದ್ದಾರೆ. ತಮಿಳುನಾಡು ಪೊಲೀಸರು ಆಕೆಯ ಭದ್ರತೆ ಬಗ್ಗೆ ದಾಖಲಾತಿ ನೀಡಬೇಕಿದೆ.  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ಪತಿಯನ್ನು ನೋಡಲು 15 ದಿನಗಳ ಪೆರೋಲ್ ನೀಡಬೇಕೆಂದು ಎರಡು ದಿನಗಳ ಹಿಂದೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT