ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರದಲ್ಲಿ ಭೀಕರ ರಸ್ತೆ ಅಪಘಾತ: 4 ವಿದ್ಯಾರ್ಥಿಗಳ ದಾರುಣ ಸಾವು

ಬೆಂಗಳೂರು ನಗರದ ಹೊರ ಭಾಗದಲ್ಲಿ ಬೆಳಗಿನ ಜಾವ 4.30 ಗಂಟೆಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕಂಟೈನರ್​ ಮತ್ತು ಕಾರು ನಡುವೆ ಭೀಕರ ...

ರಾಮನಗರ: ಬೆಂಗಳೂರು ನಗರದ ಹೊರ ಭಾಗದಲ್ಲಿ ಬೆಳಗಿನ ಜಾವ 4.30 ಗಂಟೆಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕಂಟೈನರ್​ ಮತ್ತು ಕಾರು ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದಾರೆ. 
ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್‌ ಬಳಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಮೊದಲು ದಾಟಿ ಎದುರಿನಿಂದ ಬರುತ್ತಿದ್ದ ಕಂಟೈನರ್​ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ‌ ವೈದ್ಯಕೀಯ ವಿದ್ಯಾರ್ಥಿಗಳು. ಅವರ ಪೈಕಿ ಇಬ್ಬರು ಯವಕರು ಹಾಗೂ ಇಬ್ಬರು ಯುವತಿಯರು. ಇಬ್ಬರನ್ನು ಕೇರಳ ಮೂಲದ ನಿಕಿತ್ ಜಾಯ್ (21), ಜೋಯಿಲ್ ಜಾಕಬ್ (22) ಎಂದು ಗುರುತಿಸಲಾಗಿದೆ. ಈ ಸಂಬಂಧ ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT