ರಾಜ್ಯ

ರಾಮನಗರದಲ್ಲಿ ಭೀಕರ ರಸ್ತೆ ಅಪಘಾತ: 4 ವಿದ್ಯಾರ್ಥಿಗಳ ದಾರುಣ ಸಾವು

Shilpa D
ರಾಮನಗರ: ಬೆಂಗಳೂರು ನಗರದ ಹೊರ ಭಾಗದಲ್ಲಿ ಬೆಳಗಿನ ಜಾವ 4.30 ಗಂಟೆಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಕಂಟೈನರ್​ ಮತ್ತು ಕಾರು ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿದ್ದಾರೆ. 
ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್‌ ಬಳಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಮೊದಲು ದಾಟಿ ಎದುರಿನಿಂದ ಬರುತ್ತಿದ್ದ ಕಂಟೈನರ್​ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ‌ ವೈದ್ಯಕೀಯ ವಿದ್ಯಾರ್ಥಿಗಳು. ಅವರ ಪೈಕಿ ಇಬ್ಬರು ಯವಕರು ಹಾಗೂ ಇಬ್ಬರು ಯುವತಿಯರು. ಇಬ್ಬರನ್ನು ಕೇರಳ ಮೂಲದ ನಿಕಿತ್ ಜಾಯ್ (21), ಜೋಯಿಲ್ ಜಾಕಬ್ (22) ಎಂದು ಗುರುತಿಸಲಾಗಿದೆ. ಈ ಸಂಬಂಧ ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
SCROLL FOR NEXT