ಅರಲೂರು ಕೆರೆಯಲ್ಲಿ ಮೃತ ಮೀನುಗಳು ತೇಲುತ್ತಿರುವುದು. 
ರಾಜ್ಯ

ಬೆಂಗಳೂರು: ಅರಲೂರು ಕೆರೆಯಲ್ಲಿ ಸಾವಿರಾರು ಮೀನುಗಳ ಸಾವು

ಸೋಮಸುಂದರಪಾಳ್ಯದ ಅರಲೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದು ಪತ್ತೆಯಾಗಿದೆ....

ಬೆಂಗಳೂರು: ಸೋಮಸುಂದರಪಾಳ್ಯದ ಅರಲೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಸುತ್ತಮುತ್ತಲ ಕೈಗಾರಿಕೆಗಳಿಂದ ಹೊರಬರುವ ಕಲುಷಿತ ನೀರಿನಿಂದ ಮೀನುಗಳು ಮೃತಪಟ್ಟಿವೆ ಎಂದು ಸ್ಥಳೀಯರು ಆರೋಪಿಸುತ್ತಾರೆ.
ಕಳೆದ ಮೂರು ದಿನಗಳಿಂದ ಮೀನುಗಳು ಕೆರೆಯಲ್ಲಿ ಸಾಯುತ್ತಿವೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮೀನುಗಳ ಸಾಕಣೆಗೆ ಕೆರೆಯನ್ನು ಭೋಗ್ಯಕ್ಕೆ ಪಡೆದಿದ್ದ ಶ್ರೀನಿವಾಸ್, ತಮಗೆ ಸುಮಾರು 15 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನುತ್ತಾರೆ. ನಾನು ಈ ಕೆರೆಯನ್ನು ಭೋಗ್ಯಕ್ಕೆ ಪಡೆದಿದ್ದು ಕಾಟ್ಲ ಮತ್ತು ರೊಹು ಮೀನನ್ನು ಸಾಕುತ್ತಿದ್ದೇನೆ. ಇದಕ್ಕೆ ಸಾಕಷ್ಟು ಬಂಡವಾಳ ಹಾಕಿದ್ದೇನೆ. ಕಳೆದ ಮೂರು ದಿನಗಳಲ್ಲಿ ಸಾವಿರಾರು ಮೀನುಗಳು ಮೃತಪಟ್ಟಿವೆ. ಬಿಬಿಎಂಪಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ಸಲ್ಲಿಸಿದ್ದೇನೆ, ಆದರೆ ಇದು ಒಳ ಚರಂಡಿ ನೀರಿನ ಸೇರ್ಪಡೆಯಿಂದಾಗಿದೆ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ ಎನ್ನುತ್ತಾರೆ.
ಅಕ್ಕಪಕ್ಕದ ಕೈಗಾರಿಕೆಗಳಿಂದ, ಅಪಾರ್ಟ್ ಮೆಂಟ್ ಗಳಿಂದ ನೀರನ್ನು ಶುದ್ಧೀಕರಿಸದೆ ಕೆರೆಗೆ ಬಿಡಲಾಗುತ್ತಿದೆ. 
ಕಳೆದ ವರ್ಷ ಅಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಹೀಗೆ ಮೃತಪಟ್ಟಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT