ಅರಲೂರು ಕೆರೆಯಲ್ಲಿ ಮೃತ ಮೀನುಗಳು ತೇಲುತ್ತಿರುವುದು. 
ರಾಜ್ಯ

ಬೆಂಗಳೂರು: ಅರಲೂರು ಕೆರೆಯಲ್ಲಿ ಸಾವಿರಾರು ಮೀನುಗಳ ಸಾವು

ಸೋಮಸುಂದರಪಾಳ್ಯದ ಅರಲೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದು ಪತ್ತೆಯಾಗಿದೆ....

ಬೆಂಗಳೂರು: ಸೋಮಸುಂದರಪಾಳ್ಯದ ಅರಲೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದಿರುವುದು ಪತ್ತೆಯಾಗಿದೆ. ಸುತ್ತಮುತ್ತಲ ಕೈಗಾರಿಕೆಗಳಿಂದ ಹೊರಬರುವ ಕಲುಷಿತ ನೀರಿನಿಂದ ಮೀನುಗಳು ಮೃತಪಟ್ಟಿವೆ ಎಂದು ಸ್ಥಳೀಯರು ಆರೋಪಿಸುತ್ತಾರೆ.
ಕಳೆದ ಮೂರು ದಿನಗಳಿಂದ ಮೀನುಗಳು ಕೆರೆಯಲ್ಲಿ ಸಾಯುತ್ತಿವೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮೀನುಗಳ ಸಾಕಣೆಗೆ ಕೆರೆಯನ್ನು ಭೋಗ್ಯಕ್ಕೆ ಪಡೆದಿದ್ದ ಶ್ರೀನಿವಾಸ್, ತಮಗೆ ಸುಮಾರು 15 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನುತ್ತಾರೆ. ನಾನು ಈ ಕೆರೆಯನ್ನು ಭೋಗ್ಯಕ್ಕೆ ಪಡೆದಿದ್ದು ಕಾಟ್ಲ ಮತ್ತು ರೊಹು ಮೀನನ್ನು ಸಾಕುತ್ತಿದ್ದೇನೆ. ಇದಕ್ಕೆ ಸಾಕಷ್ಟು ಬಂಡವಾಳ ಹಾಕಿದ್ದೇನೆ. ಕಳೆದ ಮೂರು ದಿನಗಳಲ್ಲಿ ಸಾವಿರಾರು ಮೀನುಗಳು ಮೃತಪಟ್ಟಿವೆ. ಬಿಬಿಎಂಪಿಯ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ಸಲ್ಲಿಸಿದ್ದೇನೆ, ಆದರೆ ಇದು ಒಳ ಚರಂಡಿ ನೀರಿನ ಸೇರ್ಪಡೆಯಿಂದಾಗಿದೆ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ ಎನ್ನುತ್ತಾರೆ.
ಅಕ್ಕಪಕ್ಕದ ಕೈಗಾರಿಕೆಗಳಿಂದ, ಅಪಾರ್ಟ್ ಮೆಂಟ್ ಗಳಿಂದ ನೀರನ್ನು ಶುದ್ಧೀಕರಿಸದೆ ಕೆರೆಗೆ ಬಿಡಲಾಗುತ್ತಿದೆ. 
ಕಳೆದ ವರ್ಷ ಅಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಹೀಗೆ ಮೃತಪಟ್ಟಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT