ಉಡುಪಿ: ಬೈಕ್ ಅಪಘಾತದಲ್ಲಿ ಮಗು ಸಾವು, ತಂದೆಯ ವಿಚಾರಣೆ 
ರಾಜ್ಯ

ಉಡುಪಿ: ಬೈಕ್ ಅಪಘಾತದಲ್ಲಿ ಮಗು ಸಾವು, ತಂದೆಯ ವಿರುದ್ಧ ಕೇಸ್!

ಬೈಕ್ ಅಪಘಾತದಿಂದ ತನ್ನ ಮಗುವಿನ ಸಾವಿಗೆ ಕಾರಣನಾದ ತಂದೆಯನ್ನು ಉಡುಪಿ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಉಡುಪಿ: ಬೈಕ್ ಅಪಘಾತದಿಂದ ತನ್ನ ಮಗುವಿನ ಸಾವಿಗೆ ಕಾರಣನಾದ ತಂದೆಯನ್ನು ಉಡುಪಿ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅ.2ರಂದು ಮಣಿಪಾಲದಿಂದ ಹಿರಿಯಡ್ಕ ಕಡೆ ಬರುವಾಗ ಈ ಘಟನೆ ಸಂಭವಿಸಿದೆ. ಅಂದು ಉಮೇಶ್ ಪೂಜಾರಿ ಮತ್ತು ಆತನ ಪತ್ನಿ, ಮತ್ತು ಹದಿನೆಂಟು ತಿಂಗಳ ಮಗು ಬೈಕ್ ನಲ್ಲಿ ಹಿರಿಯಡ್ಕದ ಕಡೆ ಬರುವಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿದೆ. ಅಪಘಾತದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟರೆ ದಂಪತಿಗಳು ಸಣ್ಣ ಪುಟ್ಟ ಗಾಯಗಳೊಡನೆ ಪಾರಾಗಿದ್ದಾರೆ. 
ಮಗುವನ್ನು ಕಳೆದುಕೊಂಡ ಆಘಾತದಿಂದ ದಂಪತಿಗಳು ಹೊರಬರುವಷ್ಟರಲ್ಲಿ ಉಮೇಶ್ ಅವರ ಮೇಲೆ ಐಪಿಸಿ ಸೆ.279- ರ್ಯಾಶ್ ಡ್ರೈವಿಂಗ್ ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪೋಲೀಸರು ಪ್ರಕರಣ ದಾಖಲಿಸಿರುವುದು ತಿಳಿದಿದೆ. ಉಮೇಶ್ ಅಳಿಯನಾದ ಕೃಷ್ಣ ಪೂಜಾರಿ ಮಣಿಪಾಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 
ಉಡುಪಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಡಾ. ಸಂಜೀವ್ ಪಾಟೀಲ್ ಹೇಳುವಂತೆ "ಅಪಘಾತ ದ ಪ್ರಕರಣದಲ್ಲಿ ಮಗುವಿನ ತಂದೆಯನ್ನು ಬುಕ್ ಮಾಡುವ ಅವಕಾಶವಿದೆ. ಆದರೆ ಇವರ ಮೇಲೆ ಏಕೆ ಆಪಾದನೆ ಮಾಡಲಾಗಿದೆ ಎಂಬುದರ ಬಗ್ಗೆ ನಾನು ಹೇಳಲಾರೆ. ಇದು ರಸ್ತೆ ನಿರ್ಮಿಸಿದ ಇಂಜಿನಿಯರ್ ದೋಷವೊ ಅಥವಾ ಸತ್ತ ಮಗುವಿನ ತಂದೆ ಉಮೇಶ್ ರವರ ವೇಗದ ಚಾಲನೆಯ ಕಾರಣವೋ ಎಂದು ಖಚಿತಪಡಿಸಿಕೊಳ್ಳಬೇಕು. ತನಿಖೆ ಮುಂದುವರೆದಂತೆ ಅದು ಸ್ಪಷ್ಟವಾಗುತ್ತದೆ."
ರಾಷ್ಟ್ರೀಯ ಹೆದ್ದಾರಿಯ ಈ ಭಾಗದಲ್ಲಿ ಕೆಲವು ತಿಂಗಳುಗಳಿಂದಲೂ ಅಪಘಾತ ಪ್ರಕರಣಗಳು ಮರುಕಳಿಸುತ್ತಲಿದೆ.
ಎನ್ಎಚ್ಎಐ ಅಧಿಕಾರಿಗಳಿಂದ ದಾಖಲೆಗಳನ್ನು ಸಂಗ್ರಹಿಸುತ್ತೇವೆ. ರಸ್ತೆ ದುರವಸ್ಥೆಗೆ ಅವರ ನಿರ್ಲಕ್ಷ್ಯವೇ ಕಾರಣವೆಂದು ಕಂಡು ಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೋಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!