ಕನ್ನಡಿಗ ಸೈನಿಕ ಆರ್. ನರೇಂದ್ರ 
ರಾಜ್ಯ

ಜಮ್ಮು ಕಾಶ್ಮೀರದಲ್ಲಿ ಕನ್ನಡಿಗ ಯೋಧನ ಆತ್ಮಹತ್ಯೆ; ನಂಬಲಾಗದು ಎಂದ ಪೋಷಕರು

ಜಮ್ಮು ಕಾಶ್ಮೀರ ಅನಂತ್‌ನಾಗ್‌ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಂಗಳೂರು ಮೂಲದ ಯೋಧ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ

ಬೆಂಗಳೂರು: ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಂಗಳೂರು ಮೂಲದ ಯೋಧ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಗೆ ಸಂಬಂಧಿಸಿ ಯೋಧನ ತಂದೆ ಸೇನೆ ವಿರುದ್ಧ ಹರಿಹಾಯ್ದಿದ್ದಾರೆ.
"ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂಬಲಾಗುತ್ತಿಲ್ಲ." ನರೇಂದ್ರ ತಾಯಿ ಪುಷ್ಪ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. "ನರೇಂದ್ರ ಭಾನುವಾರ ಸಂಜೆ ವೀಡಿಯೊ ಕರೆ ಮಾಡಿದ್ದನು ಆಗ ಎಂದಿನಂತೆ ಮಾತನಾಡಿದ್ದಾನೆ, ಅವನು ಯಾವುದೇ ಸಮಸ್ಯೆಗಳ ಬಗ್ಗೆ ಸುಳಿವು ನೀಡಿರಲಿಲ್ಲ. ನನ್ನ ಮಗ ಖಿನ್ನತೆಗೆ ಒಳಗಾಗಲಿಲ್ಲ," ಎಂದು ಅವರು ಹೇಳಿದರು.
"ನನ್ನ ಮಗ ಆತ್ಮಹತ್ಯೆ ಮಾಡಿಕೊಂಡರೆ ಸೈನ್ಯದ ಅಧಿಕಾರಿಗಳು ನಮಗೆ ಸಾಕ್ಷ್ಯವನ್ನು ತೋರಿಸಬೇಕು, ನನ್ನ ಮಗನ ಸಾವಿನ ಬಗ್ಗೆ ನಿಕರ ಕಾರಣ ಕಂಡುಹಿಡಿಯಲು ನಾವು ಕಾನೂನು ನೆರವು ಪಡೆಯುತ್ತೇವೆ" ಎಂದು ಪುಷ್ಪಾ ಹೇಳಿದ್ದಾರೆ.
ಬೆಂಗಳೂರಿನ ರಾಜಗೋಪಾಲನಗರ ನಿವಾಸಿ ನರೇಂದ್ರ ಆರ್ ಎರಡು ವರ್ಷಗಳ ಹಿಂದೆ ಸೈನ್ಯಕ್ಕೆ ಸೇರಿದ್ದನು.. ನಿನ್ನೆ ರಾತ್ರಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯೋಧನ ಸಾವಿನ ಕುರಿತು ಸೇನೆಯ ಹಿರಿಯ ಅಧಿಕಾರಿಗಳು ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. 
ಅಂತಿಮ ವಿಧಿ ವಿಧಾನಕ್ಕಾಗಿ ಮಂಗಳವಾರದಂದು ಯೋಧನ ಪಾರ್ಥಿವ ಶರೀರವನ್ನು ನಗರಕ್ಕೆ ತರಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT