ಸಾಂದರ್ಭಿಕ ಚಿತ್ರ 
ರಾಜ್ಯ

ರವಾಂಡಾದಲ್ಲಿ ಬಂಧಿಗಳಾಗಿದ್ದ ಹಕ್ಕಿ ಪಿಕ್ಕಿಗಳ ಸುರಕ್ಷಿತ ಬಿಡುಗಡೆ

ಗಿಡಮೂಲಿಕೆ ಔಷಧ ವ್ಯಾಪಾರಕ್ಕಾಗಿ ಆಫ್ರಿಕಾ ರಾಷ್ಟ್ರಕ್ಕೆ ತೆರಳಿ ರವಾಂದಾದಲ್ಲಿ ಬಂಧನಕ್ಕೊಳಗಾಗಿದ್ದ 11 ಮಂದಿ ಹಕ್ಕಿಪಿಕ್ಕಿ ಜನಾಂಗದವರನ್ನು ಸುರಕ್ಷಿತವಾಗಿ ಬಿಡಿಸುವಲ್ಲಿ ಗೃಹ ಇಲಾಖೆ ಯಶಸ್ವಿಯಾಗಿದೆ.

ಬೆಂಗಳೂರು: ಗಿಡಮೂಲಿಕೆ ಔಷಧ ವ್ಯಾಪಾರಕ್ಕಾಗಿ ಆಫ್ರಿಕಾ ರಾಷ್ಟ್ರಕ್ಕೆ ತೆರಳಿ ರವಾಂದಾದಲ್ಲಿ ಬಂಧನಕ್ಕೊಳಗಾಗಿದ್ದ  11 ಮಂದಿ ಹಕ್ಕಿಪಿಕ್ಕಿ ಜನಾಂಗದವರನ್ನು ಸುರಕ್ಷಿತವಾಗಿ ಬಿಡಿಸುವಲ್ಲಿ ಗೃಹ ಇಲಾಖೆ ಯಶಸ್ವಿಯಾಗಿದೆ.
ಶಿವಮೊಗ್ಗ ಜಿಲ್ಲೆಯವರಾದ ಹಕ್ಕಿಪಿಕ್ಕಿಗಳು ಮೂಲಿಕೆ ಔಷಧಗಳ ಮಾರಾಟಕ್ಕೆಂದು ರವಾಂಡಾಗೆ ತೆರಳಿದ್ದ ಸಮಯ ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದರು.
ಹಕ್ಕಿಪಿಕ್ಕಿ ಬುಡಕಟ್ಟು ಜನರ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತರಾದ ಗೃಹ ಸಚಿವ ರಾಮಲಿಂಗಾರೆಡ್ಡಿ, ಅಗತ್ಯ ಕ್ರಮ ಜರುಗಿಸಲು ಪ್ರಧಾನ ಕಾರ್ಯದರ್ಶಿ ಸುಭಾಷ್‌ಚಂದ್ರ, ಪೊಲೀಸ್‌ ಮಹಾನಿರ್ದೇಶಕ ಆರ್‌.ಕೆ.ದತ್ತಾ ಅವರಿಗೆ ಸೂಚನೆ ನೀಡಿದ್ದರು. ಈ ಇಬ್ಬರು ಅಧಿಕಾರಿಗಳು ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದ್ದಲ್ಲದೆ ರಾಯಭಾರ ಕಚೇರಿ ಜತೆಗೂ ಸಂಪರ್ಕ ಸಾಧಿಸಿದ್ದರು. ಈ ಪ್ರಯತ್ನಗಳ ಹಿನ್ನೆಲೆಯಲ್ಲಿ ಇದೀಗ 11 ಮಂದಿ ಬಂಧಿತರ ಬಿಡುಗಡೆಯಾಗಿದೆ.
ಬಿಡುಗಡೆಗೊಂಡಿರುವ ಹಕ್ಕಿಪಿಕ್ಕಿ ಜನರನ್ನು ರಾಜ್ಯಕ್ಕೆ ಕರೆಸಿಕೊಳ್ಳಲು ತ್ವರಿತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಇಲಾಖೆ ಮೂಲಗಳು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT