ಸಾಂದರ್ಭಿಕ ಚಿತ್ರ 
ರಾಜ್ಯ

ನಂಜನಗೂಡು: ಕಳ್ಳನೆಂದು ಶಂಕಿಸಿ, ವ್ಯಕ್ತಿಯೋರ್ವನನ್ನು ಕೊಂದ ಗ್ರಾಮಸ್ಥರು

ಕಳ್ಳನೆಂದು ಅನುಮಾನಿಸಿ ವ್ಯಕ್ತಿಯೊಬ್ಬನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ ನಡೆದಿದೆ. ..

ಮೈಸೂರು: ಕಳ್ಳನೆಂದು ಅನುಮಾನಿಸಿ ವ್ಯಕ್ತಿಯೊಬ್ಬನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ ನಡೆದಿದೆ. 
ಬದನವಾಗಿಲು ಗ್ರಾಮದ ರಮೇಶ್ ಅಲಿಯಾಸ್ ಕೋತಿ ರಮೇಶ್ (43) ಮೃತ ವ್ಯಕ್ತಿ. ಈತ ಚಾಮಲಪುರದಹುಂಡಿ ಎಕ್ಸ್ ಟೆನ್ಸನ್ ನಲ್ಲಿ ವಾಸವಿದ್ದ. ಆತನನ್ನು ಕಳ್ಳನೆಂದು ಶಂಕಿಸಿದ ಚಂದ್ರಶೇಖರ್ ಎಂಬಾತ ಭಾನುವಾರ ನಸುಕಿನಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿದ್ದಾನೆ.  ನಂತರ ಗ್ರಾಮಸ್ಥರೆಲ್ಲಾ ಸೇರಿ ಥಳಿಸಿದ್ದಾರೆ. 
ಯಾರೋ ನನ್ನನ್ನು ಅಟ್ಟಾಡಿಸಿಕೊಂಡು ಬಂದರು. ತಪ್ಪಿಸಿಕೊಳ್ಳಲು ಕೊಟ್ಟಿಗೆಗೆ ಬಂದು ಅವಿತುಕೊಂಡೆ’ ಎಂದು ರಮೇಶ್‌  ಪದೇ ಪದೇ ಬೇಡಿಕೊಂಡಿದ್ದಾನೆ, ಆದರೆ ಆತನ ಮಾತಿಗೆ ಬೆಲೆ ಕೊಡದ ಗ್ರಾಮಸ್ಥರು ಆತನನ್ನು ಥಳಿಸಿದ್ದಾರೆ. ನಂತರ ರಮೇಶ್ ಕುಸಿದು ಬಿದ್ದಿದ್ದಾನೆ. ಆತ ಸಾವನ್ನಪ್ಪಿರುವುದು ತಿಳಿದು ಬಂದಿದೆ,. ರಮೇಶ್ ಸಹೋದರ ರಾಜು ಚಂದ್ರಶೇಖರ್ ಮತ್ತು ಕೆಂಪರಾಜು ಎಂಬುವವರ ವಿರುದ್ಧ ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT