ಸಾಂದರ್ಭಿಕ ಚಿತ್ರ 
ರಾಜ್ಯ

ನಂಜನಗೂಡು: ಕಳ್ಳನೆಂದು ಶಂಕಿಸಿ, ವ್ಯಕ್ತಿಯೋರ್ವನನ್ನು ಕೊಂದ ಗ್ರಾಮಸ್ಥರು

ಕಳ್ಳನೆಂದು ಅನುಮಾನಿಸಿ ವ್ಯಕ್ತಿಯೊಬ್ಬನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ ನಡೆದಿದೆ. ..

ಮೈಸೂರು: ಕಳ್ಳನೆಂದು ಅನುಮಾನಿಸಿ ವ್ಯಕ್ತಿಯೊಬ್ಬನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಕೊರೆಹುಂಡಿ ಗ್ರಾಮದಲ್ಲಿ ನಡೆದಿದೆ. 
ಬದನವಾಗಿಲು ಗ್ರಾಮದ ರಮೇಶ್ ಅಲಿಯಾಸ್ ಕೋತಿ ರಮೇಶ್ (43) ಮೃತ ವ್ಯಕ್ತಿ. ಈತ ಚಾಮಲಪುರದಹುಂಡಿ ಎಕ್ಸ್ ಟೆನ್ಸನ್ ನಲ್ಲಿ ವಾಸವಿದ್ದ. ಆತನನ್ನು ಕಳ್ಳನೆಂದು ಶಂಕಿಸಿದ ಚಂದ್ರಶೇಖರ್ ಎಂಬಾತ ಭಾನುವಾರ ನಸುಕಿನಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿದ್ದಾನೆ.  ನಂತರ ಗ್ರಾಮಸ್ಥರೆಲ್ಲಾ ಸೇರಿ ಥಳಿಸಿದ್ದಾರೆ. 
ಯಾರೋ ನನ್ನನ್ನು ಅಟ್ಟಾಡಿಸಿಕೊಂಡು ಬಂದರು. ತಪ್ಪಿಸಿಕೊಳ್ಳಲು ಕೊಟ್ಟಿಗೆಗೆ ಬಂದು ಅವಿತುಕೊಂಡೆ’ ಎಂದು ರಮೇಶ್‌  ಪದೇ ಪದೇ ಬೇಡಿಕೊಂಡಿದ್ದಾನೆ, ಆದರೆ ಆತನ ಮಾತಿಗೆ ಬೆಲೆ ಕೊಡದ ಗ್ರಾಮಸ್ಥರು ಆತನನ್ನು ಥಳಿಸಿದ್ದಾರೆ. ನಂತರ ರಮೇಶ್ ಕುಸಿದು ಬಿದ್ದಿದ್ದಾನೆ. ಆತ ಸಾವನ್ನಪ್ಪಿರುವುದು ತಿಳಿದು ಬಂದಿದೆ,. ರಮೇಶ್ ಸಹೋದರ ರಾಜು ಚಂದ್ರಶೇಖರ್ ಮತ್ತು ಕೆಂಪರಾಜು ಎಂಬುವವರ ವಿರುದ್ಧ ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT