ಮೈಸೂರು ರಸ್ತೆ (ಸಂಗ್ರಹ ಚಿತ್ರ) 
ರಾಜ್ಯ

ಸಿದ್ದರಾಮಯ್ಯ ಮೈಸೂರು ರಸ್ತೆ ಮೂಲಕ ತಮ್ಮ ತವರು ಜಿಲ್ಲೆಗೆ ಪ್ರಯಾಣಿಸಲಿ: ನಾಗರಿಕರ ಒತ್ತಾಯ

ಮೈಸೂರು ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರಿಗೆ ಸಾವು ಎಂಬುದು ಕಟ್ಟಿಟ್ಟ ಬತ್ತಿ ಎಂಬಂತಹ ಸನ್ನಿವೇಶ ನಿರ್ಮಾಣವಾಗಿದೆ. ಭಾನುವಾರ ಮೈಸೂರು ...

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರಿಗೆ ಸಾವು ಎಂಬುದು ಕಟ್ಟಿಟ್ಟ ಬತ್ತಿ ಎಂಬಂತಹ ಸನ್ನಿವೇಶ ನಿರ್ಮಾಣವಾಗಿದೆ. ಭಾನುವಾರ ಮೈಸೂರು ರಸ್ತೆಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಇಟ್ಟಿಗೆ ಲಾರಿಗೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮೆಟ್ರೋ ಕಾಮಗಾರಿ ಆರಂಭವಾದಾಗಿನಿಂದ ಸಮಸ್ಯೆ ಮತ್ತಷ್ಟು ಹೆಚ್ಚಿದೆ,  ಮೋಡ ಕಟ್ಟಿದ ವಾತಾವರಣವಿದ್ದರೇ ದ್ವಿಚಕ್ರ ವಾಹನ ಸವಾರರಿಗೆ ಸಂಚಾರ ಮಾಡುವುದು ದುಸ್ತರವಾಗುತ್ತಿದೆ. ವಾತಾವರಣದ ದೂಳಿಗೆ ರಸ್ತೆಗಳು ಸರಿಯಾಗಿ ಕಾಣುವುದಿಲ್ಲ, ಮಳೆ ಬಂದ ವೇಳೆ ಗುಂಡಿಗಳಲ್ಲಿ ನೀರು ತುಂಬಿಕೊಂರುತ್ತದೆ, ರಸ್ತೆ ಹೇಗಿದೆ ಎಂಬುದನ್ನು ಸವಾರರು ಕಲ್ಪಿಸಿಕೊಳ್ಳಲಪ ಸಾಧ್ಯವಾಗುವುದಿಲ್ಲ, ಸಿಮೆಂಟ್ ಮತ್ತು ಅವಶೇಷಗಳಿಂದ ಅವೈಜ್ಞಾನಿಕವಾಗಿ ಗುಂಡಿಗಳನ್ನು ಮುಚ್ಚಿರುವುದು ರಸ್ತೆಯನ್ನು ಮತ್ತಷ್ಟು ಹಾಳು ಮಾಡಿದೆ.
ಸತತವಾಗಿ ನಡೆಯುತ್ತಿರುವ ದುರಂತಗಳಿಂದ ಆಕ್ರೋಶಗೊಂಡಿರುವ ಸ್ಥಳೀಯ ನಾಗರಿಕರು, ಸಿಎಂ ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರ ಮೈಸೂರಿಗೆ ತೆರಳುವಾಗ ಈ ರಸ್ತೆಯಲ್ಲಿ ಸಂಚರಿಸಲಿ ಎಂದು ಆಗ್ರಹಿಸಿದ್ದಾರೆ. ಆಗ ಮಾತ್ರ ಜನ ಕಷ್ಟ ಏನು ಎಂಬುದು ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ಮೈಸೂರು ರಸ್ತೆ ಈ ಪರಿಸ್ಥಿತಿಗೆ ತಲುಪಿದ್ದರು ಸರ್ಕಾರ ಏಕೆ ಮೌನವಾಗಿದೆ, ಯಾವುದೇ ರಿಪೇರಿ ಕಾಮಗಾರಿ ಆರಂಭಿಸಿಲ್ಲ ಎಂದು ಸ್ತಳೀಯ ನಾಗರಿಕರು ಪ್ರಶ್ನಿಸಿದ್ದಾರೆ, ಸದಾ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಸಂಚರಿಸುವ ಸಿಎಂ ಒಮ್ಮೆ ಈ ಮಾರ್ಗದ ಮೂಲಕ ತೆರಳಲಿ, ಆಗ ಜನ ಸಾಮಾನ್ಯರ ಕಷ್ಠ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.
ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ನಗರದ ಕಾರ್ಯಕ್ರಮಗಳಿಗೆ ಸಿಎಂ ಈ ರಸ್ತೆ ಮೂಲಕ ತೆರಳುವಾಗ ಬಿಬಿಎಂಪಿ ಪ್ಯಾಚ್ ಅಪ್ ಕೆಲಸಗಳನ್ನು ಮಾಡುತ್ತದೆ, ಆಗ ಸಿಎಂ ಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಅರಿವಾಗುತ್ತದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT