ಲಾರಿ ಮುಷ್ಕರ - ಸಾಂದರ್ಭಿಕ ಚಿತ್ರ 
ರಾಜ್ಯ

ಇಂದಿನಿಂದ ಎರಡು ದಿನ ಲಾರಿ ಮುಷ್ಕರ

ಸರಕು ಮತ್ತು ಸೇವಾ ತೆರಿಗೆಯಲ್ಲಿನ(ಜಿಎಸ್​ಟಿ) ಅವೈಜ್ಞಾನಿಕ ಅಂಶಗಳನ್ನು ವಿರೋಧಿಸುವುದಲ್ಲದೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯನ್ನು ವಿರೋಧಿಸಿ..........

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆಯಲ್ಲಿನ(ಜಿಎಸ್​ಟಿ) ಅವೈಜ್ಞಾನಿಕ ಅಂಶಗಳನ್ನು ವಿರೋಧಿಸುವುದಲ್ಲದೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯನ್ನು ವಿರೋಧಿಸಿ ಇಂದಿನಿಂದ ಎರಡು ದಿನಗಳ ಕಾಲ ದೇಶವ್ಯಾಪಿ ಲಾರಿ ಮುಷ್ಕರ ನಡೆಯಲಿದೆ.
ಅಖಿಲ ಭಾರತ ಮೋಟಾರು ಟ್ರಾನ್ಸ್​ಪೋರ್ಟ್ ಕಾಂಗ್ರೆಸ್ ನೀಡಿರುವ ಈ ಮುಷ್ಕರಕ್ಕೆ ಕರೆ ನೀಡಿದ್ದು ದಕ್ಷಿಣವಲಯ ಮೋಟಾರು ಟ್ರಾನ್ಸ್ ಪೋರ್ಟರ್ಸ್ ಕ್ಷೇಮಾಭಿವೃದ್ಧಿ ಸಂಘ ಸಹ ಬೆಂಬಲ ಘೋಷಿಸಿದೆ.
ಇದರಿಂದ ಕರ್ನಾಟಕ ಸೇರಿ ಭಾರತದ ಆದ್ಯಂತ 2 ದಿನ ಲಾರಿ ಸಂಚಾರ ಸ್ಥಗಿತವಾಗಲಿದೆ. ದಿನಬಳಕೆ ವಸ್ತುಗಳ , ಸರಬರಾಜು ವ್ಯತ್ಯಯವಾಗಲಿದೆ. ಹಾಲು,ಪೆಟ್ರೋಲ್ ಹಾಗೂ ಡೀಸೆಲ್ ಲಾರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಷಣ್ಮುಗಪ್ಪ ತಿಳಿಸಿದ್ದಾರೆ.
ಡಿಸೇಲ್ ದರವನ್ನು ಜಿಎಸ್ ಟಿಯಿಂದ ಹೊರಗಿಟ್ಟಿರುವುದರಿಂದ ಡಿಸೇಲ್ ವಾಹನ ಬಳಸುವವರಿಗೆ ಕಷ್ಟವಾಗುತ್ತಿದೆ. ಇನ್ನು ಪೆಟ್ರೋಲ್ ಮತ್ತು ಡಿಸೆಲ್ ದರಗಳನ್ನು ನಿತ್ಯವೂ ಪರಿಷ್ಕರಣೆ ಮಾಡುವುದರಿಂದ ಡಿಸೇಲ್ ಬೆಲೆಯಲ್ಲಿ ದಿನ ದಿನವೂ ಏರಿಕೆ ಆಗುತ್ತಿದೆ. ಇದು ಲಾರಿ ಮಾಲಿಕರು ಸೇರಿ ಗ್ರಾಹಕರಿಗೆ ಹೊರೆಯಾಗುತ್ತಿದೆ ಎಂದು ಟ್ರಕ್ಕರ್ಸ್ ಅಸೋಸಿಯೇಷನ್ ತಿಳಿಸಿದೆ.
ಮುಷ್ಕರ ನಿರತರ ಪ್ರಮುಖ ಬೇಡಿಕೆಗಳು ಹೀಗಿವೆ-
  • ಹೆಚ್ಚುವರಿ ತೆರಿಗೆ ಸಂಗ್ರಹ ನಿಲ್ಲಿಸಬೇಕು.
  • ದೇಶವ್ಯಾಪಿ ಏಕ ರೂಪದ ಡೀಸೆಲ್ ದರ ಜಾರಿಗೆ ಬರಬೇಕು.
  • 347 ಹೆದ್ದಾರಿ ಟೋಲ್ ರದ್ದುಪಡಿಸಿ ವಾರ್ಷಿಕ ಒಂದು ಬಾರಿ ಟೋಲ್ ನಿಯಮ ಜಾರಿ ಮಾಡಬೇಕು.
  • ಹೆದ್ದಾರಿಗಳಲ್ಲಿ ಸಾರಿಗೆ ಅಧಿಕಾರಿಗಳು ನೀಡುವ ಕಿರುಕುಳ ನಿಲ್ಲಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT