ಸಂಚಾರ ನಿಯಮ ಉಲ್ಲಂಘಿಸಿದವರ ಫೋಟೋ ಟ್ವೀಟ್ ಮಾಡಿದ ಸಂಚಾರಿ ಪೊಲೀಸ್ ಡಿಸಿಪಿ 
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ: ವೈರಲ್ ಆಯ್ತು ಬೆಂಗಳೂರು ಟ್ರಾಫಿಕ್ ಪೊಲೀಸರ ಕವಿತೆ

ನಗರ ಪೂರ್ವ ಸಂಚಾರಿ ಡಿಸಿಪಿ ಅಭಿಷೇಕ್ ಗೋಯೆಲ್ ತಮ್ಮ ಟ್ವಿಟ್ಟರ್ ನಲ್ಲಿ ಪೊಲೀಸರ ಸಂದಿಗ್ಧ ಪರಿಸ್ಥಿತಿ ಬಗ್ಗೆ ಕವಿತೆ ಬರೆದಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ...

ಬೆಂಗಳೂರು: ನಗರ ಪೂರ್ವ ಸಂಚಾರಿ ಡಿಸಿಪಿ ಅಭಿಷೇಕ್ ಗೋಯೆಲ್ ತಮ್ಮ ಟ್ವಿಟ್ಟರ್ ನಲ್ಲಿ ಪೊಲೀಸರ ಸಂದಿಗ್ಧ ಪರಿಸ್ಥಿತಿ ಬಗ್ಗೆ  ಕವಿತೆ ಬರೆದಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು. ಅದರ ಸಂಬಂಧಿತ ಫೋಟೋಗಳನ್ನು ಡಿಸಿಪಿ ಅಭಿಷೇಕ್ ಗೋಯೆಲ್ ತಮ್ಮ ಟ್ಟಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿರುವ ಬೆಂಗಳೂರು ಪೊಲೀಸರು ಹಲವು ವಿಷಯಗಳನ್ನು ಟ್ವೀಟ್ ಮಾಡುವ ಮೂಲಕ ಜನತೆಗೆ ಸಂಚಾರಿ ನಿಯಮಗಳ ಬಗ್ಗೆ ಶಿಕ್ಷಣ ನೀಡುತ್ತಿರುತ್ತಾರೆ.
ಕೇವಲ ಬೆಂಗಳೂರು ಮಾತ್ರವಲ್ಲದೇ ಬೇರೆ ರಾಜ್ಯಗಳ ಪೊಲೀಸರು ಹಾಕುವ ಹಲವು ಪೋಸ್ಟ್ ಗಳು ವೈರಲ್ ಆಗಿವೆ,  ಸೋಮವಾರ ಆಂಧ್ರ ಪ್ರದೇಶ ಪೊಲೀಸ್ ಸಿಬ್ಬಂದಿಯೊಬ್ಬರು ಒಂದೇ ಬೈಕ್ ನಲ್ಲಿ 5 ಮಂದಿ ಪ್ರಯಾಣಿಸುತ್ತಿದ್ದವರಿಗೆ ಕೈ ಮುಗಿಯುತ್ತಿದ್ದ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಕೆ. ಹನುಮಂತರಾಯುಡು ಎಂಬಾತ ತನ್ನ ಇಬ್ಬರು ಮಕ್ಕಳನ್ನು ಬೈಕ್ ನ ಪೆಟ್ರೋಲ್ ಪಂಪ್ ಮೇಲೆ ಕೂರಿಸಿಕೊಂಡು, ತನ್ನ ಹೆಂಡತಿ ಮತ್ತು ಮತ್ತೊಬ್ಬರನ್ನು ಹಿಂದಿನ ಸೀಟ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಫೋಟೋ ವೈರಲ್ ಆಗಿತ್ತು. ಆತ ಇದೇ ಮೊದಲ ಬಾರಿಯಲ್ಲಿ ಇದಕ್ಕು ಮುನ್ನ ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ, ಎಚ್ಚರಿಕೆ ನೀಡಿದ್ದರೂ ಹೆಲ್ಮೆಟ್ ಧರಿಸದೇ ಬೈಕ್ ನಲ್ಲಿ 5 ಮಂದಿ ಜೊತೆ ಸಂತರಿಸುತ್ತಿದ್ದ ಎಂದು ಸರ್ಕಲ್ ಇನ್ಸ್ ಪೆಕ್ಟರ್ ಶುಭ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT