ವಿಧಾನಸೌಧ 
ರಾಜ್ಯ

2 ದಿನಗಳ ವಿಧಾನಸಭೆ ವಿಶೇಷ ಅಧಿವೇಶನಕ್ಕೆ ಬರೋಬ್ಬರೀ 26 ಕೋಟಿ?

ವಿಧಾನಸೌಧದ ವಜ್ರ ಮಹೋತ್ಸವ ಆಚರಣೆ ವಿಷಯ ವಿಧಾನಸಭಾ ಸಚಿವಾಲಯ ಮತ್ತು ಸಚಿವ ಸಂಪುಟದ ಮಧ್ಯೆ ಪ್ರತಿಷ್ಠೆಯಾಗಿ ಪರಿಣಮಿಸಿದ್ದು, ...

ಬೆಂಗಳೂರು: ವಿಧಾನಸೌಧದ ವಜ್ರ ಮಹೋತ್ಸವ ಆಚರಣೆ ವಿಷಯ ವಿಧಾನಸಭಾ ಸಚಿವಾಲಯ ಮತ್ತು ಸಚಿವ ಸಂಪುಟದ ಮಧ್ಯೆ ಪ್ರತಿಷ್ಠೆಯಾಗಿ ಪರಿಣಮಿಸಿದ್ದು, ಪರಸ್ಪರ ಸಂಘರ್ಷಕ್ಕೆ ಕಾರಣವಾಗಿದೆ.
ಅಕ್ಟೋಬರ್  25 ಮತ್ತು 26ರಂದು ಎರಡು ದಿನ ವಿಧಾನಸೌಧದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಸುಮಾರು 26 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ವಿಧಾನಸಭೆ ಸಚಿವಾಲಯ ನೇರವಾಗಿ ಆರ್ಥಿಕ ಇಲಾಖೆಗೆ ಕಳುಹಿಸಿರುವುದು ಸಿಎಂ ಸಿದ್ದರಾಮಯ್ಯ ಕೋಪಕ್ಕೆ ಕಾರಣವಾಗಿದೆ. ಸಚಿವಾಲಯ ನಡೆಸುತ್ತಿರುವ ಈ ಸಿದ್ದತಾ ಪ್ರಕ್ರಿಯೆಯಲ್ಲಿ  ಸಿಎಂ ಮತ್ತು ಅವರ ಸಂಪುಟದ ಹಲವು ಸಹೋದ್ಯೋಗಿಗಳು ಭಾಗಿಯಾಗಿಲ್ಲ, 
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಿದ್ದು, ವಿಧಾನ ಸಭೆ  ಸ್ಪೀಕರ್ ಕೆ.ಬಿ ಕೋಳಿವಾಡ ಮತ್ತು ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ವಜ್ರ ಮಹೋತ್ಸವ ಸಂಬಂಧ ಏಕ ಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಹಲವು ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.ಜಂಟಿ ಅಧಿವೇಶನ ಕರೆಯಲು ಸಚಿವ ಸಂಪುಟ ಸಭೆಯ ಒಪ್ಪಿಗೆಯನ್ನೇ ಪಡೆದಿಲ್ಲ. ಅದಕ್ಕೂ ಮೊದಲೇ ಕೋಳಿವಾಡ ಮತ್ತು ಶಂಕರಮೂರ್ತಿ ತಾವಾಗಿಯೇ ನಿರ್ಧಾರ ಕೈಗೊಂಡು ರಾಷ್ಟ್ರಪತಿ ಅವರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾರ್ಯಕ್ರಮದ ಅಂದಾಜು ವೆಚ್ಚ ಕುರಿತು ಸಲ್ಲಿಕೆಯಾದ ಪ್ರಸ್ತಾವನೆ  ಕುರಿತು ಹಲವು ಸಚಿವರು ಆಚ್ಚರಿ ವ್ಯಕ್ತ ಪಡಿಸಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಉದ್ಘಾಟನಾ ಭಾಷಣ ಹೊರತು ಪಡಿಸಿ, ರಾಜ್ಯದ ಶ್ರೀಮಂತ ಇತಿಹಾಸ ಮತ್ತು ಸಾಂಸ್ಕೃತಿಕ ಧಾರ್ಮಿಕತೆಗಳನ್ನು ಪ್ರದರ್ಶನಕ್ಕೆ ಕಾರ್ಯಕ್ರಮ ಸಂಪೂರ್ಣವಾಗಿ  ಮೀಸಲಾಗಿರುತ್ತದೆ. ವಿಧಾನ ಸೌಧದ ಪೂರ್ವಧ್ವಾರದಲ್ಲಿ ಎರಡು ದಿನಗಳ ಸಂಜೆ ವೇಳೆ ಕಾರ್ಯಕ್ರಮವಿರುತ್ತದೆ.
ಇನ್ನೂ ನವೆಂಬರ್ 13 ರಿಂದ ರಾಜ್ಯ ವಿಧಾನ ಮಂಡಲಗಳ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿದೆ. 10 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗಗಳ ಕುಂದುಕೊರತೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT