ಹಿರಿಯ ಪತ್ರಕರ್ತ ಸಾಯಿನಾಥ್ 
ರಾಜ್ಯ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್ ಗೆ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ

ಹಿರಿಯ ಪತ್ರಕರ್ತ ಪಿ.ಸಾಯಿನಾಥ್ 2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ.

ಚಿತ್ರದುರ್ಗ: ಹಿರಿಯ ಪತ್ರಕರ್ತ ಪಿ.ಸಾಯಿನಾಥ್  2016 ನೇ ಸಾಲಿನ ಬಸವಶ್ರೀ ಪ್ರಶಸ್ತಿ ಗೆ ಆಯ್ಕೆ ಆಗಿದ್ದಾರೆ. 
ಚಿತ್ರದುರ್ಗದ ಮುರುಘಾಮಠ ದಿಂದ‌ ಕೊಡಮಾಡುವ ಈ ಪ್ರಶಸ್ತಿಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪಿ. ಸಾಯಿನಾಥ್ ಆಯ್ಕೆ ಆಗಿದ್ದಾರೆ ಎಂದು ಶಿವಮೂರ್ತಿ ಮುರುಘಾಶರಣರು ಪ್ರಕಟಿಸಿದರು. ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಾಯಿನಾಥ್ ನೀಡಿರುವ ಕೊದುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಬಸವಶ್ರೀ ಪ್ರಶಸ್ತಿ ಯು ರೂ. 5 ಲಕ್ಷ ನಗದು, ಪ್ರಮಾಣಪತ್ರ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಅ.23 ರಂದು ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 
12 ನೆಯ ಶತಮಾನದ ಸಾಮಾಜಿಕ ಸುಧಾರಕ ಬಸವೇಶ್ವರನ ತತ್ವಗಳನ್ನು ಅನುಸರಿಸಿ ಸಮಾಜಕ್ಕೆ ತಮ್ಮ ವಿಶೇಷ ಕೊಡುಗೆ ನೀಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀದಲಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.
'ಪೀಪಲ್ಸ್ ಆರ್ಚಿವ್ ಆಫ್ ರೂರಲ್ ಇಂಡಿಯಾ' ದ ಸಂಸ್ಥಾಪಕ ಸಂಪಾದಕರಾಗಿರುವ ಸಾಯಿನಾಥ್ 'ದಿ ಹಿಂದೂ' ಪತ್ರಿಕೆಯ ಗ್ರಾಮೀಣ ವ್ಯವಹಾರಗಳ ವಿಭಾಗದ ಸಂಪಾದಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT