ರಾಜ್ಯ

ಬೆಂಗಳೂರು: ಗೋಹತ್ಯೆ ಬಗ್ಗೆ ದೂರಿಗೆ ಮುಂದಾದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ

Vishwanath S
ಬೆಂಗಳೂರು: ಕಳೆದ ರಾತ್ರಿ ತಲಘಟ್ಟಪುರ ಬಳಿಯ ಟಿಪ್ಪು ಸರ್ಕಲ್ ಖಸಾಯಿಖಾನೆ ಬಳಿ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. 
ಗೋಹತ್ಯೆ ಬಗ್ಗೆ ದೂರು ನೀಡಿದ್ದಕ್ಕಾಗಿ ಹಲ್ಲೆ ನಡೆಸಿದ್ದು ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯಲ್ಲಿ ಸೀನಿಯರ್ ಅಧಿಕಾರಿಯಾಗಿರುವ ನಂದಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಗೋಹತ್ಯೆ ಬಗ್ಗೆ ದೂರು ನೀಡಿ ಸ್ಥಳಕ್ಕೆ ಇಬ್ಬರು ಪೊಲೀಸ್ ಪೇದೆಗಳೊಂದಿಗೆ ಹೋಗಿದ್ದಾಗ ಸುಮಾರು 100ಕ್ಕೂ ಹೆಚ್ಚು ಜನರು ಹಲ್ಲೆಗೆ ಮುಂದಾಗಿದ್ದರು. 
ಇನ್ನು ನಂದಿನಿ ಮೇಲೆ ಹಲ್ಲೆ ನಡೆಯುವಾಗ ಜತೆಯಲ್ಲಿದ್ದ ಇಬ್ಬರು ಪೇದೆಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಹಲ್ಲೆ ವೇಳೆ ದುಷ್ಕರ್ಮಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
SCROLL FOR NEXT