ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಒಳಚರಂಡಿಯಲ್ಲಿ ಕೊಚ್ಚಿಹೋದ 16 ವರ್ಷದ ಬಾಲಕಿ 
ರಾಜ್ಯ

ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಚರಂಡಿಯಲ್ಲಿ ಕೊಚ್ಚಿಹೋದ 16 ವರ್ಷದ ಬಾಲಕಿ

ಬೆಂಗಳೂರು ಮಹಾಮಳೆಗೆ ಮತ್ತೊಂದು ಜೀವ ಬಲಿಯಾಗಿದ್ದು, ಸಿವಿ ರಾಮನ್ ನಗರದ ಬಾಗ್ಮನೆ ಟೆಕ್ ಪಾರ್ಕ್ ಹಿಂಭಾಗದಲ್ಲಿರುವ ಒಳಚರಂಡಿಯಲ್ಲಿ 16 ವರ್ಷದ ಬಾಲಕಿ ನರಸಮ್ಮ ಕೊಚ್ಚಿಹೋಗಿದ್ದಾಳೆ.

ಬೆಂಗಳೂರು: ಬೆಂಗಳೂರು ಮಹಾಮಳೆಗೆ ಮತ್ತೊಂದು ಜೀವ ಬಲಿಯಾಗಿದ್ದು, ಸಿವಿ ರಾಮನ್ ನಗರದ ಬಾಗ್ಮನೆ ಟೆಕ್ ಪಾರ್ಕ್ ಹಿಂಭಾಗದಲ್ಲಿರುವ ಚರಂಡಿಯಲ್ಲಿ 16 ವರ್ಷದ ಬಾಲಕಿ ನರಸಮ್ಮ ಕೊಚ್ಚಿಹೋಗಿದ್ದಾಳೆ. 
ಭಾನುವಾರ ಬೆಳಿಗ್ಗೆ ಯುವತಿ ಚರಂಡಿಯ ಬಳಿ ಬಹಿರ್ದೆಸೆಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಸ್ಥಳೀಯರು ಬಾಲಕಿಯನ್ನು ರಕ್ಷಿಸಲು ಯತ್ನಿಸಿದರಾದರೂ ಸಹ ರಕ್ಷಣೆ ಯಶಸ್ವಿಯಾಗಲಿಲ್ಲ, ಗಂಟೆಗಳ ನಂತರ ಆಕೆಯ ಮೃತದೇಹ ಘಟನಾ ಸ್ಥಳದಿಂದ 400 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಸ್ಥಳೀಯರಿಗೆ ಮೃತದೇಹ ಪತ್ತೆಯಾಗಿರುವುದರಿಂದ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ಮಾಹಿತಿ ನೀಡಿರಲಿಲ್ಲ ಎಂದು ಬೈಯ್ಯಪ್ಪನಹಳ್ಳಿ ಪೊಲೀಸರು ತಿಳಿಸಿದ್ದಾರೆ. 
ಚರಂಡಿ ಬಳಿ ಬೇಲಿ ಹಾಕದಿದ್ದಕ್ಕೆ ಮೃತ ಯುವತಿಯ ಕುಟುಂಬ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT