ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ 
ರಾಜ್ಯ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿಪಡೆಯುತ್ತಿದೆ, ದೇಶದ ಸ್ವಾತಂತ್ರ್ಯಕ್ಕೆ ಮೊದಲು ಹೋರಾಡಿದ್ದು ಟಿಪ್ಪು ಸುಲ್ತಾನ್ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿಪಡೆಯುತ್ತಿದೆ, ದೇಶದ ಸ್ವಾತಂತ್ರ್ಯಕ್ಕೆ ಮೊದಲು ಹೋರಾಡಿದ್ದು ಟಿಪ್ಪು ಸುಲ್ತಾನ್ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಮಾಧ್ಯಮವೊಂದು ವರದಿ ಮಾಡಿದೆ. 
ಅ.15 ರಂದು ಅರಮನೆ ಮೈದಾನದಲ್ಲಿ ನಡೆದ ಪಿಎಫ್ಐ ಸಮಾವೇಶದಲ್ಲಿ ಮಾತನಾಡಿರುವ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುವ, ಟಿಪ್ಪು ಸುಲ್ತಾನ್ ಕೊಡುಗೆಯ ಬಗ್ಗೆ ಮಾತನಾಡುವ ಭರಾಟೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದು, "ದೇಶದ ಸ್ವಾತಂತ್ರ್ಯಕ್ಕಾಗಿ ಮೊದಲು ಹೋರಾಟ ಮಾಡಿದ್ದು ಟಿಪ್ಪು ಸುಲ್ತಾನ್ ಗಾಂಧಿ, ಸುಭಾಷ್ ಏನು ಮಾಡಿಲ್ಲ". ಎಂದಿದ್ದಾರೆ.
ದೇಶದ ಸ್ವಾತಂತ್ರ್ಯಕ್ಕಾಗಿ ಮೊದಲು ಹೋರಾಟ ಮಾಡಿದ್ದು ಟಿಪ್ಪು ಸುಲ್ತಾನ್, ಸ್ವಾತಂತ್ರ್ಯಕ್ಕಾಗಿ ಟಿಪ್ಪು ತನ್ನ ಮಕ್ಕಳನ್ನು ಅಡವಿಟ್ಟಿದ್ದ, ಆದರೆ ಮಹಾತ್ಮಾ ಗಾಂಧಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅವರ ಮಕ್ಕಳನ್ನು ಅಡವಿಟ್ಟಿದ್ದರೆ? ಎಂದು ಪ್ರಶ್ನಿಸಿದ್ದು, ಟಿಪ್ಪು ಪ್ರತಿಮೆ ಕೆಂಪು ಕೋಟೆಯ ಮೇಲೆ ಇರಬೇಕಿತ್ತು ಎಂದು ಹೇಳಿದ್ದಾರೆ. 
ದೇಶದಲ್ಲಿ ದನಗಳಿಗೆ ಗೌರವ ಇದೆ, ಜನರಿಗೆ ಇಲ್ಲ. ಕೇಂದ್ರ ಸರ್ಕಾರ  ದನಗಳ ಭಾರತ ಕಟ್ಟಲಿ, ನಾವು ಜನಗಳ ಭಾರತ ಕಟ್ಟುತ್ತೇವೆ ಎಂದು ಜ್ಞಾನ ಪ್ರಕಾಶ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT