ವಿಧಾನಸೌಧ 
ರಾಜ್ಯ

ವಿಧಾನಸೌಧ ವಜ್ರ ಮಹೋತ್ಸವ: ಚಿನ್ನ, ಬೆಳ್ಳಿ ಉಡುಗೊರೆ ಪ್ರಸ್ತಾವನೆ ಹಿಂಪಡೆದ ಸರ್ಕಾರ!

ವಿಧಾನಸೌಧ ವಜ್ರ ಮಹೋತ್ಸವ ಹಿನ್ನಲೆಯಲ್ಲಿ ಶಾಸಕರು, ಸಂಸತ್ ಸದಸ್ಯರು ಮತ್ತು ವಿಧಾನಮಂಡಲ ಉಭಯ ಸಚಿವಾಲಯಗಳ ಸಿಬ್ಬಂದಿಗೆ ಉಡುಗೊರೆಯಾಗಿ ನೀಡಲು ರೂ.3 ಕೋಟಿ ಖರ್ಚು ಮಾಡುತ್ತಿರುವ...

ಬೆಂಗಳೂರು; ವಿಧಾನಸೌಧ ವಜ್ರ ಮಹೋತ್ಸವ ಹಿನ್ನಲೆಯಲ್ಲಿ ಶಾಸಕರು, ಸಂಸತ್ ಸದಸ್ಯರು ಮತ್ತು ವಿಧಾನಮಂಡಲ ಉಭಯ ಸಚಿವಾಲಯಗಳ ಸಿಬ್ಬಂದಿಗೆ ಉಡುಗೊರೆಯಾಗಿ ನೀಡಲು ರೂ.3 ಕೋಟಿ ಖರ್ಚು ಮಾಡುತ್ತಿರುವ ಕುರಿತು ಭಾರೀ ವಿವಾದ, ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಉಲ್ಟಾ ಹೊಡೆದಿರುವ ಸರ್ಕಾರ ಚಿನ್ನ, ಬೆಳ್ಳಿ ಉಡುಗೊರೆಯ ಪ್ರಸ್ತಾವನೆಯನ್ನು ಹಿಂಪಡೆದುಕೊಂಡಿದೆ. 

ವಿಧಾನಸೌಧ ವಜ್ರಮಹೋತ್ಸವ ಇದೇ ತಿಂಗಳ 25 ಮತ್ತು 26 ರಂದು ನಡೆಲಿದ್ದು, ವಜ್ರಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸರ್ಕಾರ ಭಾರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದರಂತೆ ಶಾಸಕರಿಗೆ, ಸಂಸತ್ ಸದಸ್ಯರಿಗೆ ಚಿನ್ನದ ಬಿಸ್ಕತ್ತು ಹಾಗೂ ಬೆಳ್ಳಿ ತಟ್ಟೆ ನೀಡಲು ಸರ್ಕಾರ ನಿರ್ಧರಿಸಿತ್ತು. ಇದಕ್ಕೆ ಭಾರೀ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗತೊಡಗಿವೆ. 

ಈ ಹಿನ್ನಲೆಯಲ್ಲಿ ವಿವಾದ ಕುರಿತಂತೆ ಸ್ಪಷ್ಟನೆ ನೀಡಿರುವ ವಿಧಾನಸಭಾಧ್ಯಕ್ಷ ಕೋಳಿವಾಡ ಅವರು, ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳಿಗೆ ಚಿನ್ನದ ಬಿಸ್ಕತ್, ಸಿಬ್ಬಂದಿಗೆ ಬೆಳ್ಳಿ ತಟ್ಟೆ ಕೊಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಹೇಳಿದ್ದಾರೆ. 

ಸರ್ಕಾರ ಯಾರಿಗೂ ಚಿನ್ನದ ಬಿಸ್ಕತ್ ಕೊಡುತ್ತಿಲ್ಲ, ಬೆಳ್ಳಿ ತಟ್ಟೆಯನ್ನೂ ಕೊಡುತ್ತಿಲ್ಲ. ಮಾಧ್ಯಮಗಳಲ್ಲಿ ಇದು ಹೇಗೆ ವರದಿಯಾಯಿತು ಎನ್ನುವುದು ಗೊತ್ತಿಲ್ಲ. ವಿಧಾನಸಭೆ ಸ್ಪೀಕರ್ ಕಚೇರಿಯಿಂದ ಹಣಕಾಸು ಇಲಾಖೆಗೆ ಕಳುಹಿಸಿತ್ತ ಪ್ರಸ್ತಾವನೆಯಲ್ಲಿ 19 ಉಡುಗೊರೆ ಸೇರಿ ಸಿದ್ಧಪಡಿಸಿರುವ ಒಟ್ಟು ರೂ.26.87 ಕೋಟಿಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಯ ಒಪ್ಪಗೆಗೆ ಕಳುಹಿಸಲಾಗಿದೆ. 

ನಮ್ಮ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದೇ ಆದರೆ, ಹಣವನ್ನು ನೀಡಿದರೆ ನೆನಪಿನ ಕಾಣಿಕೆ ಕೊಡುತ್ತೇವೆ. ಉಡುಗೊರೆ ಬೇಡ ಎಂದು ಸಚಿವರು ಹಾಗೂ ಶಾಸಕರು ಹೇಳಿದರೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. 

ಇದೇ ವೇಳೆ ವಜ್ರಮಹೋತ್ಸವದ ಭಾರೀ ವೆಚ್ಚವನ್ನು ಸಮರ್ಥಿಸಿಕೊಂಡಿರುವ ಅವರು, ಉಡುಗೊರೆ ಕುರಿತು ಈ ವರೆಗೂ ನಿರ್ಧಾರಗಳನ್ನು ಕೈಗೊಂಡಿಲ್ಲ. ಈ ಬಾರಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಕರೆಸುತ್ತಿದ್ದೇವೆ. ಇದು ಗೌರವದ ಪ್ರಶ್ನೆಯಾಗಿದ್ದು, ಹೀಗಾಗಿ ವಿಜೃಂಭಣೆಯಿಂದ ಮಾಡುತ್ತಿದ್ದೇವೆ. ಕರ್ನಾಟಕದ ಗೌರವವನ್ನು ಕಾಪಾಡುತ್ತಿದ್ದೇವೆ. ಹೀಗಾಗಿ ಇದರಲ್ಲಿ ದುಡ್ಡು ಮುಖ್ಯವಲ್ಲ ಎಂದಿದ್ದಾರೆ. 

ನಮ್ಮ ಸಚಿವಾಲಯದ ನಿರ್ಧಾರ ನಮ್ಮದು. ಸರ್ಕಾರ ಅಂದ್ರಿ ಮುಖ್ಯಮಂತ್ರಿಗಳು, ಅವರಿಗೆ ಈ ವಿಚಾರವನ್ನು ತಿಳಿಸಿದ್ದೇವೆ. ಆದರೆ, ಸಚಿವರು, ಶಾಸಕರು ಪ್ರತ್ರಿಕೆಗಳಲ್ಲಿ ಬಂದಿರುವ ವರದಿ ನೋಡಿ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಹಣಕಾರಸಿನ ವಿಚಾರ ಆರ್ಥಿಕ ಇಲಾಖೆಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಮುಂದಿನ ನಿರ್ಧಾರ ಏನಿದ್ದರೂ ಆರ್ಥಿಕ ಇಲಾಖೆಯದ್ದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT