ಉಪವಾಸ ಸತ್ಯಾಗ್ರಹ ನಡೆಯುತ್ತಿರುವ ಸ್ಥಳದಲ್ಲಿ ನಟ ಪ್ರಕಾಶ್ ರೈ. ಹಿರಿಯ ರಂಗಕರ್ಮಿ ಪ್ರಸನ್ನ ಕೂಡ ಇದ್ದಾರೆ. 
ರಾಜ್ಯ

ಕರಕುಶಲ ವಸ್ತುಗಳ ಮೇಲೆ ತೆರಿಗೆ: ರಂಗಕರ್ಮಿ ಪ್ರಸನ್ನ ಪ್ರತಿಭಟನೆಗೆ ಸಾಥ್ ನೀಡಿದ ನಟ ಪ್ರಕಾಶ್ ರೈ

ಹಿರಿಯ ರಂಗಕರ್ಮಿ ಪ್ರಸನ್ನ ಅವರು ಕರಕುಶಲ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವಿಧಿಸಿರುವುದನ್ನು ವಿರೋಧಿಸಿ ...

ಬೆಂಗಳೂರು: ಹಿರಿಯ ರಂಗಕರ್ಮಿ ಪ್ರಸನ್ನ ಅವರು ಕರಕುಶಲ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವಿಧಿಸಿರುವುದನ್ನು ವಿರೋಧಿಸಿ ಮಾಡುತ್ತಿರುವ ಪ್ರತಿಭಟನೆಗೆ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ  ಕೈಜೋಡಿಸಿದ್ದಾರೆ.
ಪ್ರಸನ್ನ ಅವರು ಕಳೆದ 5 ದಿನಗಳಿಂದ ಈ ಕುರಿತು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು ಅದಕ್ಕೆ ಪ್ರಕಾಶ್ ರೈ ಸಾಥ್ ನೀಡಿದ್ದಾರೆ. ಕರಕುಶಲ ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸಿದರೆ ಅದು ಗ್ರಾಮೀಣ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರಸನ್ನ ಹೇಳುತ್ತಾರೆ.
ಪ್ರತಿಭಟನೆ ನಡೆಸುತ್ತಿರುವ ವೇದಿಕೆ ಬಳಿ ಖಾಸಗಿ ಚಾನೆಲ್ ವೊಂದಕ್ಕೆ ಮಾತನಾಡಿದ ಪ್ರಕಾಶ್ ರೈ, ಬುಡಕಟ್ಟು ಜನಾಂಗದವರು, ಬಡವರು, ಅರಣ್ಯದಲ್ಲಿ ಬದುಕುವವರು ತಯಾರಿಸಿದ ವಸ್ತುಗಳಿಗೆ ಸರಕು ಮತ್ತು ಸೇವಾ ತೆರಿಗೆ ವಿಧಿಸುವುದು ನ್ಯಾಯವಲ್ಲ. ಜಿಎಸ್ ಟಿ ಬಹು ರಾಷ್ಟ್ರೀಯ ಕಂಪೆನಿಗಳಿಗೆ ಸಮವಾಗಿದೆ. ಇದರಿಂದ ಅವರ ಮೇಲೆ ಆರ್ಥಿಕ ಹೊರೆ ಹೊರಿಸಿದಂತಾಗುತ್ತದೆಯಲ್ಲದೆ ಸಾಮಾಜಿಕ ಚೌಕಟ್ಟಿಗೆ ಭಂಗ ತಂದಾಗುತ್ತದೆ ಎಂದರು.
ಕರಕುಶಲ ವಸ್ತುಗಳಿಗೆ ತೆರಿಗೆ ವಿಧಿಸುವ ಮೂಲಕ ಸರ್ಕಾರ ಅವರ ನೈತಿಕತೆಯನ್ನು ಮುರಿದು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಿದ್ದೀರಿ. ಮೇಕ್ ಇನ್ ಇಂಡಿಯಾ ಮತ್ತು ಉದ್ಯೋಗ ಸೃಷ್ಟಿ ಮಾಡಿಕೊಡುವುದಾಗಿ ಹೇಳಿದ ಸರ್ಕಾರ ಮಾಡಿರುವ ನಿರ್ಧಾರವಿದು ಎಂದು ನಟ ಪ್ರಕಾಶ್ ರಾಜ್ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT