ಗೋರಕ್ಷಣೆ ಸಂಬಂಧ ದೂರು ನೀಡಿದ್ದ ಮಹಿಳೆ ಮೇಲೆ ಹಲ್ಲೆ ಆರೋಪ ಸುಳ್ಳು: ಬೆಂಗಳೂರು ಪೊಲೀಸರು 
ರಾಜ್ಯ

ಗೋರಕ್ಷಣೆ ಸಂಬಂಧ ದೂರು ನೀಡಿದ್ದ ಮಹಿಳೆ ಮೇಲೆ ಹಲ್ಲೆ ಆರೋಪ ಸುಳ್ಳು: ಬೆಂಗಳೂರು ಪೊಲೀಸ್

ಕಳೆದ ವಾರ ಬೆಂಗಳೂರಿನ ದಕ್ಷಿಣದ ಅವಳಹಳ್ಳಿ ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆದ ಬಗ್ಗೆ ದೂರು ನೀಡಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು .......

ಬೆಂಗಳೂರು: ಕಳೆದ ವಾರ ಬೆಂಗಳೂರಿನ ದಕ್ಷಿಣದ ಅವಳಹಳ್ಳಿ ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆದ ಬಗ್ಗೆ ದೂರು ನೀಡಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು ಎನ್ನುವ ಪ್ರಕರಣದ ಬಗ್ಗೆ ಪೋಲೀಸರು ಇಂದು ಸ್ಪಷ್ಟೀಕರಣ ನೀಡಿದ್ದಾರೆ. ಅದೊಂದು ಸುಳ್ಳು ಪ್ರಕರಣ ಎಂದು ಪೋಲೀಸರು ತಿಳಿಸಿದ್ದಾರೆ.
ಆಕೆ ಜನರಿಂದ ಹಲ್ಲೆಗೊಳಗಾಗುವ ಮುನ್ನ ಆಕೆಯ ಕಾರು ಆಟೋ ಒಂದಕ್ಕೆ ಢಿಕ್ಕಿ ಹೊಡೆದಿದ್ದಾಗಿ ಪೋಲೀಸರು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸರು ನಂದಿನಿಯ ಕಾರು ಆಟೋ ಒಂದಕ್ಕೆ ಢಿಕ್ಕಿಯಾಗಿದ್ದ ಕಾರಣ ಆಕ್ರೋಶಗೊಂದ ಜನರು ಆಕೆಯ ಕಾರ್ ನ ಮೇಲೆ ಕಲ್ಲೆಸೆದಿದ್ದಾರೆ ಎಂದರು. ಜನಸಮೂಹದಲ್ಲಿದ್ದ ಕೆಲವರು ಪಾಕಿಸ್ತಾನದ ಪರ ಘೋಷಣೆಗಳನ್ನು  ಕೂಗುತ್ತಿದ್ದರೆನ್ನುವ ನಂದಿನಿ ಅವರ ಆಪಾದನೆ ಸತ್ಯಕ್ಕೆ ದೂರವಾದದ್ದು ಎಂದು ಪೋಲೀಸರು ತಿಳಿಸಿದ್ದಾರೆ. 
ಮಂಗಳವಾರ ಸಂಜೆ ಯೆಲಹಂಕಾ ನ್ಯೂ ಟೌನ್ ಸಮೀಪದ ದೊಡ್ಡ ಬೆಟ್ಟಹಳ್ಳಿಯಲ್ಲಿ ಕೋರ್ಟ್ ಕಮಿಷನರ್ ಅವರ ಕಾರ್ ನ ಮೇಲೆ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿ ನಿನ್ನೆ ಒಟ್ಟು 13 ಜನರನ್ನು ಬಂಧಿಸಲಾಗಿದೆ. ನಗರದಲ್ಲಿನ ಅಕ್ರಮ ಕಸಾಯಿಖಾನೆಗಳ ತನಿಖೆಗೆ ತಂದ ರಚನೆಯಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT