ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಿರುವ ಕಾರ್ಮಿಕರು 
ರಾಜ್ಯ

ನಗರದ ಶೇ.50 ರಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ: ಬಿಬಿಎಂಪಿ

ನಗರದಲ್ಲಿ ಶೇ.50 ರಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಹೇಳಿದ್ದಾರೆ...

ಬೆಂಗಳೂರು: ನಗರದಲ್ಲಿ ಶೇ.50 ರಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರು ಹೇಳಿದ್ದಾರೆ. 
ಹಲವು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ನಗರದ ರಸ್ತೆಗಳು ಗುಂಡಿಮಯಗೊಂಡಿವೆ. ಇದರ ಪರಿಣಾಮ ರಸ್ತೆಗಳಲ್ಲಿ ಭೀಕರ ಅಪಘಾತಗಳು ಎದುರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜನರು ತೀವ್ರ ಆಕ್ರೋಶಗಳನ್ನು ವ್ಯಕ್ತಪಡಿಸತೊಡಗಿದ್ದರು. 
ಈ ಹಿನ್ನಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ 15 ದಿನಗಳ ಕಾಲ ಕಾಲಾವಕಾಶವನ್ನು ನೀಡಿ ನಗರದ ರಸ್ತೆಗಳನ್ನು ಸರಿ ಪಡಿಸುವಂತೆ ಸೂಚನೆ ನೀಡಿದ್ದರು. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಂಜುನಾಥ್ ಪ್ರಸಾದ್ ಅವರು, ಬಿಬಿಎಂಪಿ ಕಾರ್ಮಿಕರು ಗಡಿಯಾರದ ಮುಳ್ಳುಗಳಂತೆ ಕೆಲಸ ಮಾಡುತ್ತಿದ್ದಾರೆ. ನೀಡಿರುವ ಗಡುವಿನಂತೆ ಕಾರ್ಮಿಕರು ಕೆಲಸಗಳನ್ನು ಮಾಡುತ್ತಿದ್ದಾರೆ. ಸೋಮವಾರದೊಳಗಾಗಿ ನಗರದ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗುತ್ತದೆ ಎಂದು ಹೇಳಿದ್ದಾರೆ. 
ದೀಪಾವಳಿ ಹಬ್ಬದ ರಜೆಯನ್ನೂ ತೆಗೆದುಕೊಳ್ಳದೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ನಗರದ ಶೇ.50 ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ರಸ್ತೆ ಗುಂಡಿಗೆ ಮತ್ತಿಬ್ಬರು ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಈಗಾಗಲೇ ಮಳೆ ನಿಂತಿದ್ದು, ಬಿಸಿ ಡಾಂಬರು ಮಿಶ್ರಣವನ್ನು ಬಳಕೆ ಮಾಡಲಾಗುತ್ತಿದೆ. ತಣ್ಣಗಿರುವ ಡಾಂಬರು ಮಿಶ್ರಣಗಳ ಬಾಳಿಕೆ ಕೇವಲ 2-3 ತಿಂಗಳಿಗಳ ಕಾಲವಷ್ಟೇ ಇರುತ್ತದೆ. ಬಿಸಿ ಡಾಂಬರು ಮಿಶ್ರಣ ವರ್ಷಗಳ ಕಾಲ ಸಮಸ್ಯೆಗಳನ್ನು ಬಾರದಂತೆ ನೋಡಿಕೊಳ್ಳುತ್ತದೆ. 
ದುರಸ್ಥಿ ಹಂತದಲ್ಲಿರುವ ರಸ್ತೆಗಳ ಕುರಿತಂತೆ ಬಿಬಿಎಂಪಿ ಈಗಾಗಲೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಸ್ತೆಗಳನ್ನು ಸರಿಪಡಿಸುವುದು ಗುತ್ತಿಗೆದಾರರ ಕರ್ತವ್ಯವಾಗಿರುತ್ತದೆ. ಸೋಮವಾರದೊಳಗಾಗಿ ಗುತ್ತಿಗೆದಾರರು ತಮ್ಮ ಕರ್ತವ್ಯವನ್ನು ನಿರ್ವಹಿಸದೇ ಹೋದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT