ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ 
ರಾಜ್ಯ

ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ

ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಸಮೀಪ ನಡೆದಿದೆ.

ಗದಗ: ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಸಮೀಪ ನಡೆದಿದೆ.
ಗಜೇಂದ್ರಗಡ ಬಳಿಯ ಕೊಡಗಾನೂರು ಬಳಿ ಸುಮಾರು 30 ಪ್ರಯಾಣಿಕರಿದ್ದ ಬಸ್ ಅಪಗಾತಕ್ಕೀಡಾಗಿತ್ತು. ಇದರಲ್ಲಿ ನಾಗವ್ವ ಅಳವಂಡಿ (50) ಎನ್ನುವವರು ಮೃತಪಟ್ಟಿದ್ದು ಇತರೆ  8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಜೇಂದ್ರಗಡದಿಂದ ಗದಗಕ್ಕೆ ತೆರಳುತ್ತಿದ್ದ ಬಸ್ ಕೊಡಗಾನೂರು ಬಳಿ ಬರುತ್ತಿದ್ದಂತೆ ಚಾಲಕನ ಅಜಾಗರೂಕತೆಯ ಕಾರಣ  ರಸ್ತೆ ಪಕ್ಕಕ್ಕೆ ಪಲ್ಟಿ ಆಗಿದೆ. ಆ ವೇಳೆ ನಾಗವ್ವ ಅವರಿಗೆ ಗಂಭೀರ ಗಾಯವಾಗಿದ್ದು ಆಂಬುಲೆನ್ಸ್ ಗೆ ಕರೆ ಮಡಿದರೂ ಅದು ಸೂಕ್ತ ಸಮಯಕ್ಕೆ ಬರದಿದ್ದಾಗ ಇನ್ನೊಂದು ಸರ್ಕಾರಿ ಬಸ್‍ನಲ್ಲಿಯೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ನಾಗವ್ವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ 8 ಜನರನ್ನು ಗಜೇಂದ್ರಗಡ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಜೇಂದ್ರಗಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡು  ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT