ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ 
ರಾಜ್ಯ

ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ

ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಸಮೀಪ ನಡೆದಿದೆ.

ಗದಗ: ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಸಮೀಪ ನಡೆದಿದೆ.
ಗಜೇಂದ್ರಗಡ ಬಳಿಯ ಕೊಡಗಾನೂರು ಬಳಿ ಸುಮಾರು 30 ಪ್ರಯಾಣಿಕರಿದ್ದ ಬಸ್ ಅಪಗಾತಕ್ಕೀಡಾಗಿತ್ತು. ಇದರಲ್ಲಿ ನಾಗವ್ವ ಅಳವಂಡಿ (50) ಎನ್ನುವವರು ಮೃತಪಟ್ಟಿದ್ದು ಇತರೆ  8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಜೇಂದ್ರಗಡದಿಂದ ಗದಗಕ್ಕೆ ತೆರಳುತ್ತಿದ್ದ ಬಸ್ ಕೊಡಗಾನೂರು ಬಳಿ ಬರುತ್ತಿದ್ದಂತೆ ಚಾಲಕನ ಅಜಾಗರೂಕತೆಯ ಕಾರಣ  ರಸ್ತೆ ಪಕ್ಕಕ್ಕೆ ಪಲ್ಟಿ ಆಗಿದೆ. ಆ ವೇಳೆ ನಾಗವ್ವ ಅವರಿಗೆ ಗಂಭೀರ ಗಾಯವಾಗಿದ್ದು ಆಂಬುಲೆನ್ಸ್ ಗೆ ಕರೆ ಮಡಿದರೂ ಅದು ಸೂಕ್ತ ಸಮಯಕ್ಕೆ ಬರದಿದ್ದಾಗ ಇನ್ನೊಂದು ಸರ್ಕಾರಿ ಬಸ್‍ನಲ್ಲಿಯೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ನಾಗವ್ವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ 8 ಜನರನ್ನು ಗಜೇಂದ್ರಗಡ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಜೇಂದ್ರಗಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡು  ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT