ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ 
ರಾಜ್ಯ

ಗದಗ: ಕೆ ಎಸ್ ಆರ್ ಟಿಸಿ ಬಸ್ ಅಪಘಾತದಲ್ಲಿ ಮಹಿಳೆ ಸಾವು, 8 ಮಂದಿಗೆ ಗಾಯ

ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಸಮೀಪ ನಡೆದಿದೆ.

ಗದಗ: ಸರ್ಕಾರಿ ಬಸ್ ಅಪಘಾತಕ್ಕೀಡಾಗಿ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಸಮೀಪ ನಡೆದಿದೆ.
ಗಜೇಂದ್ರಗಡ ಬಳಿಯ ಕೊಡಗಾನೂರು ಬಳಿ ಸುಮಾರು 30 ಪ್ರಯಾಣಿಕರಿದ್ದ ಬಸ್ ಅಪಗಾತಕ್ಕೀಡಾಗಿತ್ತು. ಇದರಲ್ಲಿ ನಾಗವ್ವ ಅಳವಂಡಿ (50) ಎನ್ನುವವರು ಮೃತಪಟ್ಟಿದ್ದು ಇತರೆ  8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಜೇಂದ್ರಗಡದಿಂದ ಗದಗಕ್ಕೆ ತೆರಳುತ್ತಿದ್ದ ಬಸ್ ಕೊಡಗಾನೂರು ಬಳಿ ಬರುತ್ತಿದ್ದಂತೆ ಚಾಲಕನ ಅಜಾಗರೂಕತೆಯ ಕಾರಣ  ರಸ್ತೆ ಪಕ್ಕಕ್ಕೆ ಪಲ್ಟಿ ಆಗಿದೆ. ಆ ವೇಳೆ ನಾಗವ್ವ ಅವರಿಗೆ ಗಂಭೀರ ಗಾಯವಾಗಿದ್ದು ಆಂಬುಲೆನ್ಸ್ ಗೆ ಕರೆ ಮಡಿದರೂ ಅದು ಸೂಕ್ತ ಸಮಯಕ್ಕೆ ಬರದಿದ್ದಾಗ ಇನ್ನೊಂದು ಸರ್ಕಾರಿ ಬಸ್‍ನಲ್ಲಿಯೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ನಾಗವ್ವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ 8 ಜನರನ್ನು ಗಜೇಂದ್ರಗಡ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಜೇಂದ್ರಗಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ಪೋಲೀಸರು ಪ್ರಕರಣ ದಾಖಲಿಸಿಕೊಂಡು  ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಬೆಂಗಳೂರಿನಲ್ಲಿ ನಡೆಯುವ ಪಂದ್ಯಕ್ಕೆ ಶಾಸಕರಿಗೆ 4 ವಿಐಪಿ ಟಿಕೆಟ್ ಖಾತ್ರಿಗೆ ಸ್ಪೀಕರ್ ಯುಟಿ ಖಾದರ್ ನಿರ್ದೇಶನ!

Airbnb ಮೂಲಕ ಪೆಂಟ್‌ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು, ಭೀಕರ ದೃಶ್ಯ!

ನನ್ನ ಬಿಡಪ್ಪ, ನಿನಗೆ ತಾಕತ್ತಿದ್ದರೆ ಮೋದಿಗೆ ಥೂ ಅನ್ನು ನೋಡೋಣ: ಸುನೀಲ್ ಕುಮಾರ್‌ಗೆ ಸಿದ್ದರಾಮಯ್ಯ ಸವಾಲು, Video!

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

SCROLL FOR NEXT