ರಮೇಶ್ ಕುಮಾರ್ 
ರಾಜ್ಯ

ವೈದ್ಯರ ಬಗ್ಗೆ ಅಸಂಬದ್ಧ ಹೇಳಿಕೆ: ಸಚಿವ ರಮೇಶ್ ಕುಮಾರ್ ಗೆ ಐಎಂಎ ಎಚ್ಚರಿಕೆ

ವೈದ್ಯರ ಬಗ್ಗೆ ಅಗೌರವದಿಂದ ಮಾತನಾಡಿದರೇ ಭಾರತೀಯ ವೈದ್ಯಕೀಯ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ವೈದ್ಯರು ತಮ್ಮ ವೃತ್ತಿಯನ್ನು ತ್ಯಜಿಸುವುದಾಗಿ ...

ಮೈಸೂರು: ವೈದ್ಯರ ಬಗ್ಗೆ ಅಗೌರವದಿಂದ ಮಾತನಾಡಿದರೇ  ಭಾರತೀಯ ವೈದ್ಯಕೀಯ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲಾ ವೈದ್ಯರು ತಮ್ಮ ವೃತ್ತಿಯನ್ನು ತ್ಯಜಿಸುವುದಾಗಿ ಎಐಂಎ ಅಧ್ಯಕ್ಷ ಡಾ.ಎಚ್‌.ಎನ್.ರವೀಂದ್ರ ಎಚ್ಚರಿಸಿದ್ದಾರೆ.
ವೈದ್ಯರನ್ನು ಕ್ಷೌರಿಕರಿಗೆ ಹೋಲಿಸಿರುವುದು ಸಚಿವ ರಮೇಶ್ ಕುಮಾರ್ ಅವರ ವ್ಯಕ್ತಿತ್ವವನ್ನು ತೋರುತ್ತದೆ. ಸತಿವರು ಕೇವಲ ವೈದ್ಯಕೀಯ ವೃತ್ತಿಗೆ ಮಾತ್ರ ಅವಮಾನಿಸಿಲ್ಲ, ಕ್ಷೌರಿಕರನ್ನು ಅಪಮಾನಗೊಳಿಸಿದ್ದಾರೆ ಎಂದು ಹೇಳಿದ್ದಾರೆ.
ವೈದ್ಯಕೀಯ ವಲಯದಲ್ಲಿ ಕೆಲವು ಕಪ್ಪು ಕುರಿಗಳಿರಬಹುದು, ಆದರೆ ಎಲ್ಲಾರನ್ನು ಒಂದೇ ತಕ್ಕಡಿಯಲ್ಲಿ ಹಾಕಿ ತೂಗುವುದು ಸರಿಯಲ್ಲ, ರಮೇಶ್ ಕುಮಾರ್ ಸಚಿವರಾಗಿಲು ಅರ್ಹರಲ್ಲ ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಸಿಎಂ ಸಿದ್ದರಾಮಯ್ಯ ರಮೇಶ್ ಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸದಿದ್ದರೆ, ರಾಜ್ಯದ ಶೇ,80 ರಷ್ಟು ವೈದ್ಯರು ತಮ್ಮ ವೃತ್ತಿ ತೊರೆಯಲಿದ್ದಾರೆ ಎಂದು ರವೀಂದ್ರ ಹೇಳಿದ್ದಾರೆ.
ಕೆಲವು ವೈದ್ಯರು ತುಂಬಾ ಶ್ರೀಮಂತರಾಗಿದ್ದು ಐಷಾರಾಮಿ ಕಾರಿನಲ್ಲಿ ಓಡಾಡುತ್ತಾರೆ ಎಂಬುದು ಕೆಲವರ ಕಲ್ಪನೆಯಾಗಿದೆ. ಆದರೆ  ವೈದ್ಯರು ಆ ಕಾರುಗಳಿಗೆ ಇಎಂಐ ಕಟ್ಟುತ್ತಾರೆ ಎಂಬುದು ಆ ಜನಗಳಿಗೆ ಗೊತ್ತಿರುವುದಿಲ್ಲ ಎಂದು ತಿಳಿದಿರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT