ಹಾಸನಾಂಬೆ ದೇಗುಲ 
ರಾಜ್ಯ

ಹಾಸನಾಂಬೆಗೆ ಹರಿದು ಬಂದ ಜನಸಾಗರ; ದೇಗುಲಕ್ಕೆ 4.14 ಕೋಟಿ ರೂ. ಆದಾಯ

ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ವಾರ್ಷಿಕ ದರ್ಶನೋತ್ಸವಕ್ಕೆ ಅಧಿಕೃತವಾಗಿ ತೆರೆಬಿದ್ದಿದ್ದು, 11 ದಿನಗಳ ಕಾಲ ನಡೆದ ಉತ್ಸವದ ವೇಳೆ ದೇವಿಗೆ ನಾನಾ ರೂಪದಲ್ಲಿ ಒಟ್ಟು 4.14 ಕೋಟಿ ರೂ. ಗಳು ಸಂಗ್ರಹವಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.

ಹಾಸನ: ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ವಾರ್ಷಿಕ ದರ್ಶನೋತ್ಸವಕ್ಕೆ ಅಧಿಕೃತವಾಗಿ ತೆರೆಬಿದ್ದಿದ್ದು, 11 ದಿನಗಳ ಕಾಲ ನಡೆದ ಉತ್ಸವದ ವೇಳೆ ದೇವಿಗೆ ನಾನಾ ರೂಪದಲ್ಲಿ ಒಟ್ಟು 4.14 ಕೋಟಿ ರೂ. ಗಳು  ಸಂಗ್ರಹವಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.
ಪ್ರಸಕ್ತ ಸಾಲಿನ ಹಾಸನಾಂಬ ದೇವಿ ಉತ್ಸವದಲ್ಲಿ ಸುಮಾರು ಸಾವಿರಾರು ಮಂದಿ ಭಕ್ತರು ಪಾಲ್ಗೊಂಡಿದ್ದು, ದೇವಿಗೆ ಕಾಣಿಕೆ ರೂಪದಲ್ಲಿ ನೀಡುವ ಧನ ಹಾಗೂ ವಿಶೇಷ ದರ್ಶನದ ಟಿಕೆಟ್‌ ಮಾರಾಟದಿಂದ ದೇವಾಲಯಕ್ಕೆ ಬರುತ್ತಿರುವ  ಆದಾಯ ಕೂಡ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಇನ್ನು ಹಾಸನಾಂಬ ದೇವಾಲಯದ ಆವರಣದಲ್ಲಿ ಇರಿಸಲಾಗಿದ್ದ ಹುಂಡಿಯಿಂದ ಒಟ್ಟು 1.10 ಕೋಟಿ ರೂ. ಹಾಗೂ ಸಿದ್ದೇಶ್ವರ ದೇವಾಲಯದ ಹುಂಡಿಯಿಂದ 7.68 ಲಕ್ಷ ರೂ.  ಸಂಗ್ರಹವಾಗಿದೆ. ಇನ್ನು ಟಿಕೆಟ್‌ ಮಾರಾಟ, ಸೀರೆ ಹರಾಜು, ಲಾಡು ಮಾರಾಟದಿಂದ ಒಟ್ಟು 2.96 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಇನ್ನು ದೇವಾಲಯದ ಇತಿಹಾಸದಲ್ಲೇ ಇದು ಅತೀ ಹೆಚ್ಚಿನ ಪ್ರಮಾಣದ ಆದಾಯವಾಗಿದ್ದು, ಕಳೆದ ವರ್ಷ ನಾನಾ ರೂಪದಲ್ಲಿ 2.36 ಕೋಟಿ ರೂ. ಸಂಗ್ರಹವಾಗಿತ್ತು. ಹಾಸನಾಂಬ ದೇವಾಲಯದ ಹುಂಡಿ ಹಣ ಹಾಗೂ ಸಿದ್ದೇಶ್ವರ  ದೇವಾಲಯದ ಹುಂಡಿ ಹಣ ಎರಡು ಪ್ರತ್ಯೇಕ ಬ್ಯಾಂಕ್‌ ಖಾತೆಗೆ ಜಮೆಯಾಗಲಿದ್ದು, ಹಾಸನಾಂಬ ದೇವಾಲಯದ ಹುಂಡಿ ಹಣ ನಗರದ ಕೆನರಾ ಬ್ಯಾಂಕ್‌ ಮುಖ್ಯ ಶಾಖೆಯಲ್ಲಿರುವ ದೇವಾಲಯದ ಖಾತೆಗೆ ಜಮೆಯಾಗಲಿದೆ.  ಅಂತೆಯೇ ಸಿದ್ದೇಶ್ವರಸ್ವಾಮಿ ಹುಂಡಿಯ ಹಣ ಐಡಿಬಿಐ ಮುಖ್ಯ ಶಾಖೆಗೆ ಜಮೆಯಾಗಲಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.
ಚಿನ್ನ - ಬೆಳ್ಳಿ ಇಂದು ತೂಕ
ಇನ್ನು ಕೆಲವು ಭಕ್ತರು ದೇವಾಲಯಕ್ಕೆ ಚಿನ್ನ ಹಾಗೂ ಬೆಳ್ಳಿಯನ್ನು ಹುಂಡಿಯಲ್ಲಿ ಹಾಕಿದ್ದು, ಅವುಗಳ ಪರಿಶೀಲನೆ ಹಾಗೂ ಅವುಗಳ ಮೌಲ್ಯಮಾಪನವನ್ನು ಇಂದು ಮಾಡಲಾಗುವುದು. ಚಿನ್ನ ಅಲ್ಪ ಪ್ರಮಾಣದಲ್ಲಿ ಇದ್ದು, ಬೆಳ್ಳಿ  ಹೆಚ್ಚಾಗಿರುವುದರಿಂದ ಚಿನ್ನ, ಬೆಳ್ಳಿ ವರ್ತಕರನ್ನು ಕರೆಸಿ, ಅವರಿಂದ ಪರಿಶೀಲನೆ ಮಾಡಿಸಲಾಗುವುದು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT