ಹಾಸನಾಂಬೆ ದೇಗುಲ 
ರಾಜ್ಯ

ಹಾಸನಾಂಬೆಗೆ ಹರಿದು ಬಂದ ಜನಸಾಗರ; ದೇಗುಲಕ್ಕೆ 4.14 ಕೋಟಿ ರೂ. ಆದಾಯ

ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ವಾರ್ಷಿಕ ದರ್ಶನೋತ್ಸವಕ್ಕೆ ಅಧಿಕೃತವಾಗಿ ತೆರೆಬಿದ್ದಿದ್ದು, 11 ದಿನಗಳ ಕಾಲ ನಡೆದ ಉತ್ಸವದ ವೇಳೆ ದೇವಿಗೆ ನಾನಾ ರೂಪದಲ್ಲಿ ಒಟ್ಟು 4.14 ಕೋಟಿ ರೂ. ಗಳು ಸಂಗ್ರಹವಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.

ಹಾಸನ: ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ವಾರ್ಷಿಕ ದರ್ಶನೋತ್ಸವಕ್ಕೆ ಅಧಿಕೃತವಾಗಿ ತೆರೆಬಿದ್ದಿದ್ದು, 11 ದಿನಗಳ ಕಾಲ ನಡೆದ ಉತ್ಸವದ ವೇಳೆ ದೇವಿಗೆ ನಾನಾ ರೂಪದಲ್ಲಿ ಒಟ್ಟು 4.14 ಕೋಟಿ ರೂ. ಗಳು  ಸಂಗ್ರಹವಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.
ಪ್ರಸಕ್ತ ಸಾಲಿನ ಹಾಸನಾಂಬ ದೇವಿ ಉತ್ಸವದಲ್ಲಿ ಸುಮಾರು ಸಾವಿರಾರು ಮಂದಿ ಭಕ್ತರು ಪಾಲ್ಗೊಂಡಿದ್ದು, ದೇವಿಗೆ ಕಾಣಿಕೆ ರೂಪದಲ್ಲಿ ನೀಡುವ ಧನ ಹಾಗೂ ವಿಶೇಷ ದರ್ಶನದ ಟಿಕೆಟ್‌ ಮಾರಾಟದಿಂದ ದೇವಾಲಯಕ್ಕೆ ಬರುತ್ತಿರುವ  ಆದಾಯ ಕೂಡ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಇನ್ನು ಹಾಸನಾಂಬ ದೇವಾಲಯದ ಆವರಣದಲ್ಲಿ ಇರಿಸಲಾಗಿದ್ದ ಹುಂಡಿಯಿಂದ ಒಟ್ಟು 1.10 ಕೋಟಿ ರೂ. ಹಾಗೂ ಸಿದ್ದೇಶ್ವರ ದೇವಾಲಯದ ಹುಂಡಿಯಿಂದ 7.68 ಲಕ್ಷ ರೂ.  ಸಂಗ್ರಹವಾಗಿದೆ. ಇನ್ನು ಟಿಕೆಟ್‌ ಮಾರಾಟ, ಸೀರೆ ಹರಾಜು, ಲಾಡು ಮಾರಾಟದಿಂದ ಒಟ್ಟು 2.96 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಇನ್ನು ದೇವಾಲಯದ ಇತಿಹಾಸದಲ್ಲೇ ಇದು ಅತೀ ಹೆಚ್ಚಿನ ಪ್ರಮಾಣದ ಆದಾಯವಾಗಿದ್ದು, ಕಳೆದ ವರ್ಷ ನಾನಾ ರೂಪದಲ್ಲಿ 2.36 ಕೋಟಿ ರೂ. ಸಂಗ್ರಹವಾಗಿತ್ತು. ಹಾಸನಾಂಬ ದೇವಾಲಯದ ಹುಂಡಿ ಹಣ ಹಾಗೂ ಸಿದ್ದೇಶ್ವರ  ದೇವಾಲಯದ ಹುಂಡಿ ಹಣ ಎರಡು ಪ್ರತ್ಯೇಕ ಬ್ಯಾಂಕ್‌ ಖಾತೆಗೆ ಜಮೆಯಾಗಲಿದ್ದು, ಹಾಸನಾಂಬ ದೇವಾಲಯದ ಹುಂಡಿ ಹಣ ನಗರದ ಕೆನರಾ ಬ್ಯಾಂಕ್‌ ಮುಖ್ಯ ಶಾಖೆಯಲ್ಲಿರುವ ದೇವಾಲಯದ ಖಾತೆಗೆ ಜಮೆಯಾಗಲಿದೆ.  ಅಂತೆಯೇ ಸಿದ್ದೇಶ್ವರಸ್ವಾಮಿ ಹುಂಡಿಯ ಹಣ ಐಡಿಬಿಐ ಮುಖ್ಯ ಶಾಖೆಗೆ ಜಮೆಯಾಗಲಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.
ಚಿನ್ನ - ಬೆಳ್ಳಿ ಇಂದು ತೂಕ
ಇನ್ನು ಕೆಲವು ಭಕ್ತರು ದೇವಾಲಯಕ್ಕೆ ಚಿನ್ನ ಹಾಗೂ ಬೆಳ್ಳಿಯನ್ನು ಹುಂಡಿಯಲ್ಲಿ ಹಾಕಿದ್ದು, ಅವುಗಳ ಪರಿಶೀಲನೆ ಹಾಗೂ ಅವುಗಳ ಮೌಲ್ಯಮಾಪನವನ್ನು ಇಂದು ಮಾಡಲಾಗುವುದು. ಚಿನ್ನ ಅಲ್ಪ ಪ್ರಮಾಣದಲ್ಲಿ ಇದ್ದು, ಬೆಳ್ಳಿ  ಹೆಚ್ಚಾಗಿರುವುದರಿಂದ ಚಿನ್ನ, ಬೆಳ್ಳಿ ವರ್ತಕರನ್ನು ಕರೆಸಿ, ಅವರಿಂದ ಪರಿಶೀಲನೆ ಮಾಡಿಸಲಾಗುವುದು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!