ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಠದಲ್ಲಿ ಕಾಮಕೇಳಿ, ವೀಡಿಯೋ ಬಹಿರಂಗ

ಬೆಂಗಳೂರಿನ ಯಲಹಂಕದಲ್ಲಿರುವ ಇತಿಹಾಸ ಪ್ರಸಿದ್ದ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎನ್ನಲಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ಮಹಿಳೆಯ ಜೊತೆ...

 ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿರುವ ಇತಿಹಾಸ ಪ್ರಸಿದ್ದ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎನ್ನಲಾಗಿದ್ದ ಗುರುನಂಜೇಶ್ವರ ಸ್ವಾಮೀಜಿ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಬಹಿರಂಗವಾಗಿದೆ.

ಮಠದ ಹಾಲಿ ಪೀಠಾಧಿಪತಿಯಾಗಿರುವ ಶೀವಾಚಾರ್ಯ ಸ್ವಾಮೀಜಿ ಪುತ್ರನಾಗಿರುವ ದಯಾನಂದ ಎಂಬಾತ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯ ಇಂದು ಟೀವಿ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ಮಠದ ಒಳಗೇ ಈ ರಾಸಲೀಲೆ ನಡೆದಿದೆ ಎನ್ನಲಾಗಿದೆ.
ವಿರಶೈವ ಪೀಠಕ್ಕೆ ಶಿವಾಚಾರ್ಯ ಶ್ರೀಗಳು 2011ರಲ್ಲಿ ಉತ್ತರಾಧಿಕಾರಿಯನ್ನಾಗಿ ತನ್ನ ಪುತ್ರ ದಯಾನಂದನ್ನೇ ನೇಮಕಮಾಡಿಕೊಂಡಿದ್ದರು. ಆಗಲೂ ಸಹ ಮಠದ ಆಸ್ತಿಯ ಮೇಲಿನ ಆಸೆಯಿಂದ ಮಗನಿಗೆ ಪಟ್ಟಾಧಿಕಾರ ನೀಡಿದ್ದರೆನ್ನುವ ಆರೋಪ ಕೇಳಿಬಂದಿತ್ತು. ಇದೀಗ ಭಕ್ತರು ಪೀಠಾಧಿಕಾರಿಗಳ ವಿರುದ್ಧವೇ ತಿರುಗಿ ಬಿದ್ದಿದ್ದು ಗುರುನಂಜೇಶ್ವರ ಸ್ವಾಮೀಜಿ  ತಕ್ಷಣ ಮಠ ಬಿಟ್ಟು ತೆರಳಬೇಕು ಬೇರೆ ಸಭ್ಯ ಉತ್ತರಾಧಿಕಾರಿಯನ್ನು ನೇಮಿಸಬೇಕು, ಶ್ರೀಶೈಲ ಶಾಖಾ ಪೀಠದ ಶ್ರೀಗಳು ಮಠಕ್ಕೆ ಆಗಮಿಸಿ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: DCC ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ, ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ಫುಲ್ ಕಂಟ್ರೋಲ್...!

ಇನ್ನಿಬ್ಬರು DCM ನೇಮಕಕ್ಕೆ ಕಾಂಗ್ರೆಸ್ ಕಸರತ್ತು? 'ನನಗೂ ಅವಕಾಶ ಸಿಗುವ ವಿಶ್ವಾಸವಿದೆ' ಎಂದ ಸತೀಶ್ ಜಾರಕಿಹೊಳಿ..!